ಮಂಡ್ಯ

ಮಂಡ್ಯ | ಜಿಲ್ಲೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತರಲು ಪ್ರಯತ್ನ ; ಸಚಿವ ಎನ್.ಚಲುವರಾಯಸ್ವಾಮಿ ಭರವಸೆ

ನಾಗಮಂಗಲ : ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ರೈತರು ಹೈನುಗಾರಿಕೆಯನ್ನು ಅವಲಂಬಿಸಿದ್ದು, ಜಾನುವಾರುಗಳ ಆರೋಗ್ಯದ ದೃಷ್ಟಿಯಿಂದ ಮಂಡ್ಯ ಜಿಲ್ಲೆಗೆ ಡಾ.ನಿರ್ಮಲಾನಂಧನಾಥ ಸ್ವಾಮೀಜಿಗಳ ಸಲಹೆ ಮೇರೆಗೆ ಪಶು ವೈದ್ಯಕೀಯ ಶಿಕ್ಷಣ ಕಾಲೇಜು ತೆರೆಯಲು ರಾಜ್ಯ ಸರ್ಕಾರದಿಂದ ಪ್ರಯತ್ನ ಮಾಡಲಾಗುವುದು ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ತಾಲ್ಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಪದ್ಮಭೂಷಣ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೮೧ನೇ ಜಯಂತ್ಯುತ್ಸವ ಹಾಗೂ ೧೩ನೇ ವರ್ಷದ ಸಂಸ್ಮರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಗೆ ಪಶು ವೈದ್ಯಕೀಯ ವಿಜ್ಞಾನ ಕಾಲೇಜಿನ ಅವಶ್ಯವಿರುವ ಬಗ್ಗೆ ಶ್ರೀಗಳು ನನ್ನ ಗಮನಕ್ಕೆ ತಂದಿದ್ದು, ಸರ್ಕಾರದಲ್ಲಿ ಚರ್ಚಿಸಿ, ಜಿಲ್ಲೆಯಲ್ಲಿ ಪಶು ವೈದ್ಯಕೀಯ ಕಾಲೇಜು ಪ್ರಾರಂಭಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.

ನಾನು ಕೃಷಿ ಸಚಿವನಾದ ಬಳಿಕ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರದ ಶಾಖಾ ಮಠಕ್ಕೆ ಕೃಷಿ ವಿಜ್ಞಾನ ಕಾಲೇಜು ಮಂಜೂರು ಮಾಡಲಾಗಿದ್ದು, ಇಲ್ಲಿ ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳು ನಡೆಯುತ್ತಿವೆ. ಮಂಡ್ಯ ಜಿಲ್ಲೆ ಹೈನುಗಾರಿಕೆಯಲ್ಲಿ ಅಗ್ರ ಸ್ಥಾನದಲ್ಲಿರುವುದರಿಂದ ರಾಜ್ಯ ಸರ್ಕಾರದಿಂದ ಕಾಲೇಜು ತೆರಯಲು ಪ್ರಯತ್ನಿಸಲಾಗುವುದು ಎಂದರು.

ಮಾಜಿ ಉಪಮುಖ್ಯಮಂತ್ರಿ, ಹಾಲಿ ಶಾಸಕ ಸಿ.ಎನ್.ಅಶ್ವಥನಾರಾಯಣ್ ಮಾತನಾಡಿ, ನಾಡಿನ ಸಮಸ್ತ ಜನರಿಗೆ ಅನ್ನ, ಅಕ್ಷರ, ಆರೋಗ್ಯವನ್ನು ಬಿತ್ತಿ ಜನರ ಉದ್ಧಾರಕ್ಕೆ ಶ್ರಮಿಸಿದ ಸಂತ ಚುಂಚಶ್ರೀಗಳು. ಅವರ ತತ್ವ, ಆದರ್ಶ ಹಾಗೂ ಅವರ ಸಮಾಜ ಮುಖಿ ಕಾರ್ಯಗಳು ನಮಗೆ ಆದರ್ಶವಾಗಬೇಕು ಎಂದರು.

ಗುರುಗೆ ತಕ್ಕ ಶಿಷ್ಯರು ಶ್ರೀಗಳು
ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಶ್ರೀ ಮಠ ಹಾಗೂ ಶಿಕ್ಷಣ ಸಂಸ್ಥೆಗಳನ್ನು ಗುರುಗಳು ಹಾಕಿಕೊಟ್ಟಿರುವ ದಾರಿಯಲ್ಲಿ ಕೊಂಡೊಯ್ಯವ ಮೂಲಕ ನಾಡಿನ ಸಮಸ್ತ ಜನರ ಸೇವೆಯಲ್ಲಿ ನಿರತರಾಗಿದ್ದಾರೆ. ಶ್ರೀಗಳಲ್ಲಿನ ಧಾರ್ಮಿಕ ಹಾಗೂ ಸಮಾಜಿಕ ಕೆಲಸಗಳು ನಾಡಿನಾದ್ಯಂತ ಪ್ರಶಂಸನೀಯವಾಗಿವೆ ಎಂದು ಶ್ರೀಗಳ ಕಾರ್ಯವೈಖರಿ ಬಗ್ಗೆ ಶ್ಲಾಘಿಸಿದರು.

ಪುತ್ತಳಿಗೆ ಪುಷ್ಪಾರ್ಚನೆ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ೮೧ನೇ ಜಯಂತ್ಯುತ್ಸವ ಹಾಗೂ ೧೩ನೇ ವರ್ಷದ ಸಂಸ್ಮರಣಾ ಮಹೋತ್ಸವದ ಅಂಗವಾಗಿ ವೇದಿಕೆಯಲ್ಲಿ ಶ್ರೀಗಳ ಕಂಚಿನ ಪುತ್ತಳಿಗೆ ಶ್ರೀಗಳು ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ವಹಿಸಿ, ಆಶೀರ್ವಚನ ನೀಡಿದರು.

ಚಿತ್ರದುರ್ಗ ಮಠದ ಮಾದಾರ ಚನಯ್ಯ ಸ್ವಾಮೀಜಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮಾನಂದನಾಥ ಸ್ವಾಮೀಜಿ, ಬೆಂಗಳೂರು ಬಿಜಿಎಸ್ ಶಾಖಾ ಮಠದ ಪ್ರಕಾಶನಾಥ ಸ್ವಾಮೀಜಿ, ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯ ಗೋವಿಂದರಾಜು, ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ, ಕೆ.ಆರ್.ಪೇಟೆ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ, ತುಮಕೂರು ಮಾಜಿ ಶಾಸಕ ನಿಂಗಪ್ಪ, ಪತ್ರಕರ್ತ ಸುದರ್ಶನ್ ಚನ್ನಂಗಿಹಳ್ಳಿ, ರಾಜ್ಯ ಮಾಹಿತಿ ಆಯುಕ್ತರಾದ ರಾಜಶೇಖರ್, ಜಿಲ್ಲಾಧಿಕಾರಿ ಡಾ.ಕುಮಾರ, ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago