ಮಂಡ್ಯ : ವಿದ್ಯುತ್ ಅವಘಡ ಸಂಭವಿಸಿ ಎಲೆಕ್ಟ್ರಿಕಲ್ ಅಂಗಡಿ ರಾತ್ರೋ ರಾತ್ರಿ ಹೊತ್ತು ಹುರಿದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಮಂಡ್ಯದಲ್ಲಿ ನಡೆದಿದೆ.
ನಗರದ ನೂರಡಿ ರಸ್ತೆಯಲ್ಲಿರುವ ಶ್ರೀ ಸಪ್ತಗಿರಿ ಎಲೆಕ್ಟ್ರಿಕಲ್ ಬೆಂಕಿಯ ಕೆನ್ನಾಲಿಗೆ ಸುಟ್ಟು ಕರಕಲಾಗಿದೆ. ವೈರ್ ಬಂಡಲ್, ಸ್ವಿಚ್ ಬೋರ್ಡ್, ಪೈಪ್ ಗಳು, ಗೀಸರ್, ಬಲ್ಪ್ ಗಳು ಸೇರಿದಂತೆ ಸುಮಾರು 20ಕ್ಕೂ ಹೆಚ್ಚು ಮಾದರಿಯ ಎಲೆಕ್ಟ್ರಿಕ್ ವಸ್ತುಗಳು ಸುಟ್ಟು ಹೋಗಿದ್ದು, ಎಲ್ಲಾ ವಸ್ತುಗಳು ಪ್ಲಾಸ್ಟಿಕ್ ಆಗಿದ್ದರಿಂದ ಹೆಚ್ಚಿನ ಪ್ರಮಾಣದ ನಷ್ಟ ಉಂಟಾಗಿದೆ.
ಸೋಮವಾರ ಎಂದಿನಂತೆ ವ್ಯಾಪಾರ ಮಾಡಿ ರಾತ್ರಿ 8:45 ರ ಸಮಯದಲ್ಲಿ ಅಂಗಡಿ ಬಾಗಿಲು ಮುಚ್ಚಿಕೊಂಡು ಹೋಗಿದ್ದು, ಅನಂತನದ ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ, ರಾತ್ರಿ 11:15 ರ ಸಮಯದಲ್ಲಿ ದಾರಿ ಹೋಕರು ಅಂಗಡಿಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿ ಮಾಹಿತಿ ನೀಡಿದ್ದಾರೆ.
ಮಾಲೀಕರಾದ ಪ್ರಕಾಶ್ ಮತ್ತು ಪೃಥ್ವಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಬೆಂಕಿಯ ಜ್ವಾಲೆ ಹೆಚ್ಚಾಗಿದ್ದು, ಸುತ್ತಮುತ್ತಲ ಪ್ರದೇಶ ದಡ್ಡ ಹೊಗೆಯಿಂದ ಆವರಿಸಿಕೊಂಡಿದೆ, ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ದು ಆದರೆ ಪ್ಲಾಸ್ಟಿಕ್ ವಸ್ತುಗಳು ಹೆಚ್ಚಾಗಿ ಇದ್ದದ್ದರಿಂದ ಬೆಂಕಿಯ ಹೆಚ್ಚಾಗಿದ್ದು, ಹೆಚ್ಚಿನ ಅಗ್ನಿಶಾಮಕ ವಾಹನಗಳನ್ನು ಕರೆಸಿ ಬೆಂಕಿ ನಂದಿಸುವ ಕಾರ್ಯಾಚರಣೆ ಮಾಡಲಾಯಿತು.
ಅಷ್ಟರೊಳಗೆ ಅಂಗಡಿಯಲ್ಲಿದ್ದ ಎಲೆಕ್ಟ್ರಿಕಲ್ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದವು, 15 ರಿಂದ 20 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…