ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಡುವೆಯೇ ಕೃಷಿ ಚಟುವಟಿಕೆ ಹಾಗೂ ಹಂದಿ ಸಾಕಾಣಿಕೆಗೆಂದು ತೆಗೆದುಕೊಂಡಿದ್ದ ಸಾಲು ತೀರಿಸಲು ಸಾಧ್ಯವಾಗದೇ ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ರೈತ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಸ್ವಾಮಿ(47) ಆತ್ಯಹತ್ಯೆ ಮಾಡಿಕೊಂಡವರು. ಈತ ತನ್ನ ಒಂದೂವರೆ ಎಕರೆ ಜಮೀನಿನಲ್ಲಿ ಕೃಷಿ ಜತೆಗೆ ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಇದಕ್ಕಾಗಿ ವಿವಿಧ ಬ್ಯಾಂಕ್ನಲ್ಲಿ 1.60ಲಕ್ಷ ರೂ ಹಾಗೂ ಮೂರು ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ 7.90 ಲಕ್ಷ ರೂ ಪತ್ನಿ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ನಲ್ಲಿ 60 ಸಾವಿರ ರೂ ಮತ್ತು ಸ್ಥಳೀಯರಿಂದ 5 ಲಕ್ಷ ರೂ ಸಾಲ ಮಾಡಿಕೊಂಡಿದ್ದರು.
ಆದರೆ, ಬೆಳೆ ನಷ್ಟದ ಜತೆಗೆ ರೋಗದಿಂದ ಹಲವು ಹಂದಿ ಸಾವನ್ನಪ್ಪಿದ್ದವು. ಪರಿಣಾಮ ಸಾಲ ತೀರಿಸಲು ಸಾಧ್ಯವಾಗಲಿಲ್ಲ.
ಹೀಗಾಗಿ ಸಾಲ ಕೊಟ್ಟವರು ವಾಪಸ್ ಕೊಡುವಂತೆ ಕೇಳುತ್ತಿದ್ದಾರೆ. ಇದರಿಂದಾಗಿ ಬೇಸರಗೊಂಡು ಜ.19ರಂದು ತಮ್ಮ ಜಮೀನಿನಲ್ಲಿದ್ದ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಗೆದುಕೊಂಡಿದ್ದ ಸಾಲ ತೀರಿಸಲಾಗದೇ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಶರಣಾಗಿದ್ದಾರೆಂದು ಬಸರಾಳು ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲು ಮಾಡಿದ್ದಾರೆ.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…