ಮಂಡ್ಯ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ನಡುವೆಯೇ ಕೃಷಿ ಚಟುವಟಿಕೆ ಹಾಗೂ ಹಂದಿ ಸಾಕಾಣಿಕೆಗೆಂದು ತೆಗೆದುಕೊಂಡಿದ್ದ ಸಾಲು ತೀರಿಸಲು ಸಾಧ್ಯವಾಗದೇ ತಾಲೂಕಿನ ಬಿದರಕಟ್ಟೆ ಗ್ರಾಮದಲ್ಲಿ ರೈತ ನೇಣಿಗೆ ಶರಣಾಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಗ್ರಾಮದ ಸ್ವಾಮಿ(47) ಆತ್ಯಹತ್ಯೆ ಮಾಡಿಕೊಂಡವರು. ಈತ ತನ್ನ ಒಂದೂವರೆ ಎಕರೆ ಜಮೀನಿನಲ್ಲಿ ಕೃಷಿ ಜತೆಗೆ ಹಂದಿ ಸಾಕಾಣಿಕೆ ಮಾಡುತ್ತಿದ್ದರು. ಇದಕ್ಕಾಗಿ ವಿವಿಧ ಬ್ಯಾಂಕ್ನಲ್ಲಿ 1.60ಲಕ್ಷ ರೂ ಹಾಗೂ ಮೂರು ಮೈಕ್ರೋ ಫೈನಾನ್ಸ್ ಸಂಸ್ಥೆಯಲ್ಲಿ 7.90 ಲಕ್ಷ ರೂ ಪತ್ನಿ ಹೆಸರಿನಲ್ಲಿ ಮೈಕ್ರೋ ಫೈನಾನ್ಸ್ನಲ್ಲಿ 60 ಸಾವಿರ ರೂ ಮತ್ತು ಸ್ಥಳೀಯರಿಂದ 5 ಲಕ್ಷ ರೂ ಸಾಲ ಮಾಡಿಕೊಂಡಿದ್ದರು.
ಆದರೆ, ಬೆಳೆ ನಷ್ಟದ ಜತೆಗೆ ರೋಗದಿಂದ ಹಲವು ಹಂದಿ ಸಾವನ್ನಪ್ಪಿದ್ದವು. ಪರಿಣಾಮ ಸಾಲ ತೀರಿಸಲು ಸಾಧ್ಯವಾಗಲಿಲ್ಲ.
ಹೀಗಾಗಿ ಸಾಲ ಕೊಟ್ಟವರು ವಾಪಸ್ ಕೊಡುವಂತೆ ಕೇಳುತ್ತಿದ್ದಾರೆ. ಇದರಿಂದಾಗಿ ಬೇಸರಗೊಂಡು ಜ.19ರಂದು ತಮ್ಮ ಜಮೀನಿನಲ್ಲಿದ್ದ ಶೆಡ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತೆಗೆದುಕೊಂಡಿದ್ದ ಸಾಲ ತೀರಿಸಲಾಗದೇ ಹಾಗೂ ಜೀವನದಲ್ಲಿ ಜಿಗುಪ್ಸೆಗೊಂಡು ಶರಣಾಗಿದ್ದಾರೆಂದು ಬಸರಾಳು ಪೊಲೀಸ್ ಠಾಣೆಯಲ್ಲಿ ಪತ್ನಿ ದೂರು ದಾಖಲು ಮಾಡಿದ್ದಾರೆ.
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…