ಮಂಡ್ಯ : ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಪಡೆಯುತ್ತಿದ್ದ ರೈತ ಚಿಕಿತ್ಸೆ ಫಲಕಾರಿ ಮೃತಪಟ್ಟಿರುವ ಘಟನೆ ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಚಿಕ್ಕದೊಡ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರೈತ ಸಿದ್ದಪ್ಪ (65) ಮೃತ ವ್ಯಕ್ತಿ. ಮೂರು ದಿನಗಳ ಹಿಂದೆ ಜಮೀನಿನ ಬಳಿ ಕೆಲಸ ಮಾಡುವ ಸಂದರ್ಭದಲ್ಲಿ ಹಾವು ಕಚ್ಚಿದೆ. ಆದರೆ ಹಾವು ಕಚ್ಚಿರುವುದು ಇವರ ಗಮನಕ್ಕೆ ಬಂದಿಲ್ಲ. ಮರುದಿನ ಬೆಳಗ್ಗೆ ನೋಡಿದಾಗ ಕಾಲು ತೀವ್ರವಾಗಿ ಹೂತಿಕೊಂಡಿದ್ದ ಪರಿಣಾಮ ಮಂಡ್ಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ. ಸರ್ಕಾರದಿಂದ ಸೂಕ್ತ ಪರಿಹಾರ ಕೊಡುವಂತೆ ಕುಟುಂಬ ವರ್ಗದವರು ಮನವಿ ಮಾಡಿದ್ದಾರೆ.
ಗ್ರಾಮದ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಸೋಮವಾರ ಸಂಜೆ ನಡೆಯಿತು. ಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂದಿನ 34 ವಾರಗಳಿಗೆ ಆಗುವಷ್ಟು ಮೇವು ದಾಸ್ತಾನು; ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆಯೂ ದೂರ ಕೆ.ಬಿ.ರಮೇಶ ನಾಯಕ ಮೈಸೂರು :…
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್…
ಸರಗೂರು ಕಡೆಯಿಂದ ಗ್ರಾಮಕ್ಕೆ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರ ಆಗ್ರಹ ದಾಸೇಗೌಡ ಸರಗೂರು : ತಾಲ್ಲೂಕಿನ ಮಾಗುಡಿಲು ಗ್ರಾಮದಲ್ಲಿ ಪ್ರತಿದಿನ ಕೆಎಸ್ಆರ್ಟಿಸಿ…
ಆನಂದ್ ತೇಲ್ತುಂಬ್ಡೆ ಅಮ್ಮನೂ ಹೋರಾಟಗಾರರು! ವಿ.ಎಲ್.ನರಸಿಂಹಮೂರ್ತಿ ಹೆಸರಾಂತ ಚಿಂತಕ, ಮಾನವ ಮಾನವ ಹಕ್ಕುಗಳ 'ಹೋರಾಟ ಗಾರ ಡಾ.ಆನಂದ್ ತೇಲ್ತುಂಬ್ಡೆಯವರ ತಾಯಿ…
ರೈಲ್ವೆ ಇಲಾಖೆಯಲ್ಲಿ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ ಎಂಬುದು ಇಂದು ನಿನ್ನೆಯ ಆರೋಪವಲ್ಲ. ಮೊದಲಿನಿಂದಲೂ ಈ ಆರೋಪ ಇದೆ. ರೈಲ್ವೆಯಲ್ಲಿ ಸ್ಥಳೀಯರಿಗೆ ಉದ್ಯೋಗದಲ್ಲಿ…
ರಾಮನಗರ : ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ ದುರ್ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ವ್ಯಾಪ್ತಿಯಲ್ಲಿ…