ಮಂಡ್ಯ

ಮಂಡ್ಯ ರೈತರ ಬಿಟ್ಟುಬಿಡದೆ ಕಾಡುತ್ತಿವೆ ಗಜಪಡೆ

  • ಮೋಹನ್ ಕುಮಾರ್ ಬಿ.ಟಿ

ಮಂಡ್ಯ : ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ.

ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ 10 ಆನೆಗಳ ಹಿಂಡು, ಬಳಿಕ ಮದ್ದೂರು ತಾಲ್ಲೂಕಿನ ಭಾರತೀನಗರದ ಸಮೀಪ ಕಾಣಿಸಿಕೊಂಡವು.

ಇದೇ ಗಜಪಡೆಯು ಮಳವಳ್ಳಿ ತಾಲ್ಲೂಕಿನ ಹಲಗೂರು ಭಾಗದಲ್ಲಿ ಕಾಣಿಸಿಕೊಂಡವು. ಇದಾದ ಬಳಿಕ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಸಮೀಪದ ಬೆಟ್ಟದ ಪ್ರದೇಶದಲ್ಲಿ ಕಾಣಿಸಿಕೊಂಡು ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದವು.

15 ದಿನಗಳಿಂದಲೂ ಹಗಲು ಹೊತ್ತು ಕಬ್ಬಿನ ಗದ್ದೆ ಹಾಗೂ ತೆಂಗಿನ ತೋಟಗಳಲ್ಲಿ ವಾಸ ಮಾಡುವ ಇವು, ರಾತ್ರಿ ಹೊತ್ತು ತಮಗಿಷ್ಟ ಬಂದ ಕಡೆ ಪಯಣಿಸುತ್ತಿವೆ. ಮಂಗಳವಾರದಂದು ಮಂಡ್ಯ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, 10 ಆನೆಗಳು ಕಬ್ಬಿನ ಗದ್ದೆಯಲ್ಲಿ ವಾಸ್ತವ್ಯ ಹೂಡಿದ್ದು, ಕಬ್ಬಿನ ಗದ್ದೆಯನ್ನು ನಾಶಪಡಿಸಿವೆ.

ಇದರಿಂದ ರೈತರು ಬಹಳ ಆತಂಕಗೊಂಡಿದ್ದು, ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸಪಡುತ್ತಿದ್ದಾರೆ. 15 ದಿನದಿಂದಲೂ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರವೂ ಸಹ ಆನೆಗಳನ್ನು ಕಾಡಿಗೆ ಅಟ್ಟಲು ಶತಪ್ರಯತ್ನ ನಡೆಸಿದರು.

ಸಾಕಾನೆ ಕರೆತರಲು ನಿರ್ಧಾರ : ಕಬ್ಬಿನ ಗದ್ದೆಯಲ್ಲಿ ಆನೆಗಳು ಬೀಡುಬಿಟ್ಟಿರುವುದರಿಂದ ಮಂಡ್ಯ-ಮಳವಳ್ಳಿ ರಸ್ತೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೆಬ್ಬಕವಾಡಿ ಗ್ರಾಮದಿಂದ ಚಿಕ್ಕಮುಲಗೂಡು ಗ್ರಾಮದವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಯಲ್ಲಿ ಜೀಪ್ ನಿಲ್ಲಿಸಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ಬೇರೆ ಊರುಗಳನ್ನು ಬಳಸಿಕೊಂಡು ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.

15 ದಿನಗಳಿಂದಲೂ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಕಾಡಿನತ್ತ ಹೋಗದಿರುವುದರಿಂದ ಸಾಕಾನೆಗಳನ್ನು ಕರೆತಂದು ಕಾರ್ಯಾಚರಣೆ ಚುರುಕುಗೊಳಿಸಲು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.
ಸ್ಥಳದಲ್ಲೇ ಆರ್‌ಎಫ್‌ಒ ಚೈತ್ರ ನಂದೀಪ್ ಮತ್ತು ಇತರೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದಾರೆ.

ತೆಂಗಿನ ಮರವೇರಿದ ರೈತ : ಮಂಗಳವಾರ ಬೆಳಿಗ್ಗೆ ಜಮೀನಿನ ಬಳಿ ಹೋದ ರೈತನೋರ್ವ ಆನೆಗಳ ಹಿಂಡು ಕಂಡು ಭಯದಿಂದ ತೆಂಗಿನ ಮರವೇರಿ ರಕ್ಷಣೆ ಪಡೆದಿದ್ದಾನೆ. ತೆಂಗಿನ ಮರದ ಮೇಲಿಂದಲೇ ಆನೆಗಳನ್ನು ಹಿಂಡನ್ನು ವಿಡಿಯೋ ಮಾಡಿದ್ದು, ಆನೆಗಳು ಮುಂದಿನ ಗದ್ದೆಗೆ ತೆರಳಿದ ಬಳಿಕ ಮರದಿಂದ ಕೆಳಗೆ ಇಳಿದಿದ್ದಾನೆ.

 

lokesh

Recent Posts

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

4 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

7 hours ago

ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ : ಮಾಜಿ ಸಚಿವ ಎನ್.ಮಹೇಶ್‌

ಕೊಳ್ಳೇಗಾಲ : ಅಂತೂ ಇಂತು ಕುಂತಿ ಮಕ್ಕಳಿಗೆ ರಾಜ್ಯವಿಲ್ಲ ಎಂಬಂತಾಗಿದೆ ದಲಿತರ ಸ್ಥಿತಿ ಎಂದು ಮಾಜಿ ಸಚಿವ ಎನ್‌.ಮಹೇಶ್‌ ಮಾರ್ಮಿಕವಾಗಿ…

7 hours ago

ಲೋಕಭವನದ ಗ್ಲಾಸ್‌ಹೌಸ್‌ನಲ್ಲೇ ಡಿಕೆಶಿ ಪ್ರಮಾಣವಚನ ಸ್ವೀಕಾರ ; ಸಾರ್ವಜನಿಕರಿಗಿಲ್ಲ ಪ್ರವೇಶ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ ಬೆನ್ನಲ್ಲಿಯೇ ನೂತನ ಮುಖ್ಯಮಂತ್ರಿ ಆಯ್ಕೆ ಮತ್ತು ಪ್ರಮಾಣವಚನ ಸ್ವೀಕಾರಕ್ಕೆ…

8 hours ago

ಪೊನ್ನಾಚಿ | ಚಿರತೆ ದಾಳಿಗೆ ಕುರಿ ಬಲಿ

ಹನೂರು : ಜಮೀನಿನಲ್ಲಿ ಕುರಿ ಮೇಯಿಸುತ್ತಿದ್ದ ಧನಗಾಹಿ ಮೇಲೆ ಚಿರತೆ ದಾಳಿ ನಡೆಸಿದ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಪಾಯದಿಂದ ಪಾರಾಗಿದ್ದಾರೆ.…

8 hours ago

ಮಣಿಪುರದಲ್ಲಿ ನಿಷೇಧಿತ ಸಂಘಟನೆಗಳಿಗೆ ಸೇರಿದ ಐವರು ಉಗ್ರರ ಬಂಧನ

ಇಂಫಾಲ: ಮಣಿಪುರದ ಇಂಫಾಲ ಪಶ್ಚಿಮ ಮತ್ತು ಪೂರ್ವ ಜಿಲ್ಲೆಗಳಲ್ಲಿ ಎರಡು ನಿಷೇಧಿತ ಸಂಘಟನೆಗಳಿಗೆ ಸೇರಿದ ಐದು ಉಗ್ರರನ್ನು ಭದ್ರತಾ ಪಡೆಗಳು…

10 hours ago