ಮಂಡ್ಯ : ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ.
ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ 10 ಆನೆಗಳ ಹಿಂಡು, ಬಳಿಕ ಮದ್ದೂರು ತಾಲ್ಲೂಕಿನ ಭಾರತೀನಗರದ ಸಮೀಪ ಕಾಣಿಸಿಕೊಂಡವು.
ಇದೇ ಗಜಪಡೆಯು ಮಳವಳ್ಳಿ ತಾಲ್ಲೂಕಿನ ಹಲಗೂರು ಭಾಗದಲ್ಲಿ ಕಾಣಿಸಿಕೊಂಡವು. ಇದಾದ ಬಳಿಕ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಸಮೀಪದ ಬೆಟ್ಟದ ಪ್ರದೇಶದಲ್ಲಿ ಕಾಣಿಸಿಕೊಂಡು ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದವು.
15 ದಿನಗಳಿಂದಲೂ ಹಗಲು ಹೊತ್ತು ಕಬ್ಬಿನ ಗದ್ದೆ ಹಾಗೂ ತೆಂಗಿನ ತೋಟಗಳಲ್ಲಿ ವಾಸ ಮಾಡುವ ಇವು, ರಾತ್ರಿ ಹೊತ್ತು ತಮಗಿಷ್ಟ ಬಂದ ಕಡೆ ಪಯಣಿಸುತ್ತಿವೆ. ಮಂಗಳವಾರದಂದು ಮಂಡ್ಯ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, 10 ಆನೆಗಳು ಕಬ್ಬಿನ ಗದ್ದೆಯಲ್ಲಿ ವಾಸ್ತವ್ಯ ಹೂಡಿದ್ದು, ಕಬ್ಬಿನ ಗದ್ದೆಯನ್ನು ನಾಶಪಡಿಸಿವೆ.
ಇದರಿಂದ ರೈತರು ಬಹಳ ಆತಂಕಗೊಂಡಿದ್ದು, ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸಪಡುತ್ತಿದ್ದಾರೆ. 15 ದಿನದಿಂದಲೂ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರವೂ ಸಹ ಆನೆಗಳನ್ನು ಕಾಡಿಗೆ ಅಟ್ಟಲು ಶತಪ್ರಯತ್ನ ನಡೆಸಿದರು.
ಸಾಕಾನೆ ಕರೆತರಲು ನಿರ್ಧಾರ : ಕಬ್ಬಿನ ಗದ್ದೆಯಲ್ಲಿ ಆನೆಗಳು ಬೀಡುಬಿಟ್ಟಿರುವುದರಿಂದ ಮಂಡ್ಯ-ಮಳವಳ್ಳಿ ರಸ್ತೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೆಬ್ಬಕವಾಡಿ ಗ್ರಾಮದಿಂದ ಚಿಕ್ಕಮುಲಗೂಡು ಗ್ರಾಮದವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಯಲ್ಲಿ ಜೀಪ್ ನಿಲ್ಲಿಸಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ಬೇರೆ ಊರುಗಳನ್ನು ಬಳಸಿಕೊಂಡು ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.
15 ದಿನಗಳಿಂದಲೂ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಕಾಡಿನತ್ತ ಹೋಗದಿರುವುದರಿಂದ ಸಾಕಾನೆಗಳನ್ನು ಕರೆತಂದು ಕಾರ್ಯಾಚರಣೆ ಚುರುಕುಗೊಳಿಸಲು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.
ಸ್ಥಳದಲ್ಲೇ ಆರ್ಎಫ್ಒ ಚೈತ್ರ ನಂದೀಪ್ ಮತ್ತು ಇತರೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದಾರೆ.
ತೆಂಗಿನ ಮರವೇರಿದ ರೈತ : ಮಂಗಳವಾರ ಬೆಳಿಗ್ಗೆ ಜಮೀನಿನ ಬಳಿ ಹೋದ ರೈತನೋರ್ವ ಆನೆಗಳ ಹಿಂಡು ಕಂಡು ಭಯದಿಂದ ತೆಂಗಿನ ಮರವೇರಿ ರಕ್ಷಣೆ ಪಡೆದಿದ್ದಾನೆ. ತೆಂಗಿನ ಮರದ ಮೇಲಿಂದಲೇ ಆನೆಗಳನ್ನು ಹಿಂಡನ್ನು ವಿಡಿಯೋ ಮಾಡಿದ್ದು, ಆನೆಗಳು ಮುಂದಿನ ಗದ್ದೆಗೆ ತೆರಳಿದ ಬಳಿಕ ಮರದಿಂದ ಕೆಳಗೆ ಇಳಿದಿದ್ದಾನೆ.
ನವದೆಹಲಿ: ಸೆಪ್ಟೆಂಬರ್ 5ರಂದು ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯಲಾಗಿದೆ ಎಂದು ಕಾಕ್ರೋಚ್ ಜನತಾ ಪಾರ್ಟಿ (CJP) ಸುಪ್ರೀಂ ಕೋರ್ಟ್ಗೆ…
ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಸುಪ್ರೀಂಕೋರ್ಟ್ ರದ್ದುಪಡಿಸಿದೆ. ಜುಲೈನಲ್ಲಿ…
ಕಠ್ಮಂಡು: ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ ಮುಂದುವರಿದಿದ್ದು, ಮೃತರ ಸಂಖ್ಯೆ 939ಕ್ಕೆ ಏರಿಕೆಯಾಗಿದೆ. ಇನ್ನೂ ಸುಮಾರು 4 ಸಾವಿರ ಜನರು…
ಮಡಿಕೇರಿ: ತಲಕಾವೇರಿ ಸಮೀಪದ ತಣ್ಣಿಮಾನಿ ಗ್ರಾಮದಲ್ಲಿ ತಾಯಿ ಮತ್ತು ಮಗಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ.…
ಮಡಿಕೇರಿ: ಕೊಡಗಿನಲ್ಲಿ ಭಾರೀ ಮಳೆಗೆ ಬೆಟ್ಟದಲ್ಲಿ ಜಾರಿನಿಂತ ಬೃಹತ್ ಕಲ್ಲುಬಂಡೆ ಆತಂಕ ಮೂಡಿಸಿದೆ. ಮಡಿಕೇರಿ ತಾಲೂಕಿನ ಕುಂದಚೇರಿ ಗ್ರಾಮದ ಪೊಲಮಾನಿ…
ಮೈಸೂರಿನ ಚಾಮರಾಜ ಮೊಹದ ಸೋನಾರ್ ಬೀದಿಯಲ್ಲಿ ಸಾರ್ವಜನಿಕ ನಲ್ಲಿಗೆ ಸಂಪರ್ಕ ಕಲ್ಪಿಸುವ ಪೈಪ್ ಪಡೆದುಹೋಗಿದ್ದು, ಕುಡಿಯುವ ನೀರು ಚರಂಡಿ ಪಾಲಾಗುತ್ತಿದೆ.…