ಮಂಡ್ಯ

ಮಂಡ್ಯ ರೈತರ ಬಿಟ್ಟುಬಿಡದೆ ಕಾಡುತ್ತಿವೆ ಗಜಪಡೆ

  • ಮೋಹನ್ ಕುಮಾರ್ ಬಿ.ಟಿ

ಮಂಡ್ಯ : ಕಳೆದ 15 ದಿನಗಳ ಹಿಂದೆ ಕಾಡಿನಿಂದ ನಾಡಿಗೆ ಪ್ರವೇಶಿಸಿರುವ ಗಜಪಡೆಯ ಹಿಂಡು ಮಂಡ್ಯ ಜಿಲ್ಲೆಯ ರೈತರನ್ನು ಬೆಂಬಿಡದೆ ಕಾಡುತ್ತಿವೆ.

ಮೊದಲು ಮದ್ದೂರು ತಾಲ್ಲೂಕಿನ ಶಿಂಷಾ ನದಿ ಪಾತ್ರದಲ್ಲಿ ಕಾಣಿಸಿಕೊಂಡ ಎರಡು ಮರಿ ಆನೆ ಸೇರಿದಂತೆ 10 ಆನೆಗಳ ಹಿಂಡು, ಬಳಿಕ ಮದ್ದೂರು ತಾಲ್ಲೂಕಿನ ಭಾರತೀನಗರದ ಸಮೀಪ ಕಾಣಿಸಿಕೊಂಡವು.

ಇದೇ ಗಜಪಡೆಯು ಮಳವಳ್ಳಿ ತಾಲ್ಲೂಕಿನ ಹಲಗೂರು ಭಾಗದಲ್ಲಿ ಕಾಣಿಸಿಕೊಂಡವು. ಇದಾದ ಬಳಿಕ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆ ಸಮೀಪದ ಬೆಟ್ಟದ ಪ್ರದೇಶದಲ್ಲಿ ಕಾಣಿಸಿಕೊಂಡು ರೈತರು ಹಾಗೂ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದವು.

15 ದಿನಗಳಿಂದಲೂ ಹಗಲು ಹೊತ್ತು ಕಬ್ಬಿನ ಗದ್ದೆ ಹಾಗೂ ತೆಂಗಿನ ತೋಟಗಳಲ್ಲಿ ವಾಸ ಮಾಡುವ ಇವು, ರಾತ್ರಿ ಹೊತ್ತು ತಮಗಿಷ್ಟ ಬಂದ ಕಡೆ ಪಯಣಿಸುತ್ತಿವೆ. ಮಂಗಳವಾರದಂದು ಮಂಡ್ಯ ತಾಲ್ಲೂಕಿನ ಹೆಬ್ಬಕವಾಡಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು, 10 ಆನೆಗಳು ಕಬ್ಬಿನ ಗದ್ದೆಯಲ್ಲಿ ವಾಸ್ತವ್ಯ ಹೂಡಿದ್ದು, ಕಬ್ಬಿನ ಗದ್ದೆಯನ್ನು ನಾಶಪಡಿಸಿವೆ.

ಇದರಿಂದ ರೈತರು ಬಹಳ ಆತಂಕಗೊಂಡಿದ್ದು, ಆನೆಗಳನ್ನು ಕಾಡಿಗೆ ಅಟ್ಟಲು ಅರಣ್ಯ ಇಲಾಖೆ ಅಧಿಕಾರಿಗಳ ಹರಸಾಹಸಪಡುತ್ತಿದ್ದಾರೆ. 15 ದಿನದಿಂದಲೂ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ ಮಂಗಳವಾರವೂ ಸಹ ಆನೆಗಳನ್ನು ಕಾಡಿಗೆ ಅಟ್ಟಲು ಶತಪ್ರಯತ್ನ ನಡೆಸಿದರು.

ಸಾಕಾನೆ ಕರೆತರಲು ನಿರ್ಧಾರ : ಕಬ್ಬಿನ ಗದ್ದೆಯಲ್ಲಿ ಆನೆಗಳು ಬೀಡುಬಿಟ್ಟಿರುವುದರಿಂದ ಮಂಡ್ಯ-ಮಳವಳ್ಳಿ ರಸ್ತೆ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ. ಹೆಬ್ಬಕವಾಡಿ ಗ್ರಾಮದಿಂದ ಚಿಕ್ಕಮುಲಗೂಡು ಗ್ರಾಮದವರೆಗೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ರಸ್ತೆಯಲ್ಲಿ ಜೀಪ್ ನಿಲ್ಲಿಸಿಕೊಂಡು ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆ ಬಂದ್ ಮಾಡಿದ್ದಾರೆ. ಇದರಿಂದ ಬೇರೆ ಊರುಗಳನ್ನು ಬಳಸಿಕೊಂಡು ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ.

15 ದಿನಗಳಿಂದಲೂ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರೂ ಕಾಡಿನತ್ತ ಹೋಗದಿರುವುದರಿಂದ ಸಾಕಾನೆಗಳನ್ನು ಕರೆತಂದು ಕಾರ್ಯಾಚರಣೆ ಚುರುಕುಗೊಳಿಸಲು ಅಧಿಕಾರಿಗಳು ನಿರ್ಧಾರ ಮಾಡಿದ್ದಾರೆ.
ಸ್ಥಳದಲ್ಲೇ ಆರ್‌ಎಫ್‌ಒ ಚೈತ್ರ ನಂದೀಪ್ ಮತ್ತು ಇತರೆ ಅಧಿಕಾರಿಗಳು ಮೊಕ್ಕಾಂ ಹೂಡಿದ್ದು, ಎಲ್ಲ ರೀತಿಯ ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದಾರೆ.

ತೆಂಗಿನ ಮರವೇರಿದ ರೈತ : ಮಂಗಳವಾರ ಬೆಳಿಗ್ಗೆ ಜಮೀನಿನ ಬಳಿ ಹೋದ ರೈತನೋರ್ವ ಆನೆಗಳ ಹಿಂಡು ಕಂಡು ಭಯದಿಂದ ತೆಂಗಿನ ಮರವೇರಿ ರಕ್ಷಣೆ ಪಡೆದಿದ್ದಾನೆ. ತೆಂಗಿನ ಮರದ ಮೇಲಿಂದಲೇ ಆನೆಗಳನ್ನು ಹಿಂಡನ್ನು ವಿಡಿಯೋ ಮಾಡಿದ್ದು, ಆನೆಗಳು ಮುಂದಿನ ಗದ್ದೆಗೆ ತೆರಳಿದ ಬಳಿಕ ಮರದಿಂದ ಕೆಳಗೆ ಇಳಿದಿದ್ದಾನೆ.

 

lokesh

Recent Posts

ʼವಿದ್ಯಾವಂತರು ಸಮುದಾಯಕ್ಕೆ ಆಸರೆಯಾಗಬೇಕುʼ

  ಈ ನಡೆ ಶೋಷಿತ ಸಮುದಾಯಗಳ ಪ್ರಗತಿಗೆ ಸಹಕಾರಿ -ಟಿ.ಕೆ.ಹರೀಶ್ ಶಿಕ್ಷಣ ಕೇವಲ ವೈಯಕ್ತಿಕ ಬೆಳವಣಿಗೆಗೆ ಮಾತ್ರ ಸೀಮಿತವಾಗಿರಬಾರದು. ಅದು…

6 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

9 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

9 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

9 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

22 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

24 hours ago