ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ, ಇಸ್ಪೀಟ್ ಆಡುವ ಮೂಲಕ ಅಣಕು ಪ್ರದರ್ಶನ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆಲ್ಲ ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟವನ್ನು ನಿಷೇಧಿಸಲಾಗಿದೆ. ಅಂತೆಯೇ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಈ ಕ್ರಮ ಸ್ವಾಗತಾರ್ಹ. ಇಂತಹ ನಿಷೇಧ ಕ್ರಮದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಆದರೆ, ಇದೇ ರೀತಿಯ ದಿಟ್ಟ ಕ್ರಮವನ್ನು ಆನ್ಲೈನ್ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್ ಹಾಗೂ ಗೇಮ್ ಆಪ್ಗಳ ಮೇಲೆ ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.
ಐಪಿಎಲ್ ಬೆಟ್ಟಿಂಗ್, ಆನ್ಲೈನ್ ಜೂಜಾಟದಿಂದ ಯುವ ಸಮೂಹ ಹಾಳಾಗುತ್ತಿದೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಆನ್ಲೈನ್ ಬೆಟ್ಟಿಂಗ್ಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿರುವುದು ದುರಂತ. ಕೂಡಲೇ ಆನ್ಲೈನ್ ಬೆಟ್ಟಿಂಗ್ ನಿಷೇಧಿಸಬೇಕೆಂದು ಆಗ್ರಹಿಸಿದರು.
ಸಮಿತಿಯ ಇಂಡುವಾಳು ಚಂದ್ರಶೇಖರ್, ಶಂಭೂನಹಳ್ಳಿ ಸುರೇಶ್, ಸೊ.ಶಿ.ಪ್ರಕಾಶ್, ಚಂದ್ರು, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…
ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…
ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…
ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…
ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…
ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…