ಮಂಡ್ಯ: ಐಪಿಎಲ್ ಬೆಟ್ಟಿಂಗ್, ಆನ್ಲೈನ್ ಗೇಮ್ ನಿಷೇಧಕ್ಕೆ ಒತ್ತಾಯಿಸಿ ನಗರದಲ್ಲಿ ಸೋಮವಾರ ರೈತ ಸಂಘ ಏಕೀಕರಣ ಸಮಿತಿಯ ಕಾರ್ಯಕರ್ತರು ಪ್ರತಿಭಟಿಸಿದರು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆ ನಡೆಸಿ, ಇಸ್ಪೀಟ್ ಆಡುವ ಮೂಲಕ ಅಣಕು ಪ್ರದರ್ಶನ ಮಾಡಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಹಿಂದೆಲ್ಲ ಯುಗಾದಿ ಹಬ್ಬದ ಅಂಗವಾಗಿ ನಡೆಯುತ್ತಿದ್ದ ಇಸ್ಪೀಟ್ ಆಟವನ್ನು ನಿಷೇಧಿಸಲಾಗಿದೆ. ಅಂತೆಯೇ ಸಾರ್ವಜನಿಕ ಪ್ರದೇಶದಲ್ಲಿ ಇಸ್ಪೀಟ್ ಆಡದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಈ ಕ್ರಮ ಸ್ವಾಗತಾರ್ಹ. ಇಂತಹ ನಿಷೇಧ ಕ್ರಮದಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ. ಆದರೆ, ಇದೇ ರೀತಿಯ ದಿಟ್ಟ ಕ್ರಮವನ್ನು ಆನ್ಲೈನ್ ಜೂಜಾಟ, ಕ್ರಿಕೆಟ್ ಬೆಟ್ಟಿಂಗ್ ಹಾಗೂ ಗೇಮ್ ಆಪ್ಗಳ ಮೇಲೆ ಏಕೆ ತೆಗೆದುಕೊಂಡಿಲ್ಲ ಎಂದು ಪ್ರಶ್ನಿಸಿದರು.
ಐಪಿಎಲ್ ಬೆಟ್ಟಿಂಗ್, ಆನ್ಲೈನ್ ಜೂಜಾಟದಿಂದ ಯುವ ಸಮೂಹ ಹಾಳಾಗುತ್ತಿದೆ. ಹೀಗಿದ್ದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಬದಲಿಗೆ ಆನ್ಲೈನ್ ಬೆಟ್ಟಿಂಗ್ಗೆ ಸರ್ಕಾರವೇ ಪ್ರೋತ್ಸಾಹ ನೀಡುತ್ತಿರುವುದು ದುರಂತ. ಕೂಡಲೇ ಆನ್ಲೈನ್ ಬೆಟ್ಟಿಂಗ್ ನಿಷೇಧಿಸಬೇಕೆಂದು ಆಗ್ರಹಿಸಿದರು.
ಸಮಿತಿಯ ಇಂಡುವಾಳು ಚಂದ್ರಶೇಖರ್, ಶಂಭೂನಹಳ್ಳಿ ಸುರೇಶ್, ಸೊ.ಶಿ.ಪ್ರಕಾಶ್, ಚಂದ್ರು, ಕರವೇ ಜಿಲ್ಲಾಧ್ಯಕ್ಷ ಎಚ್.ಡಿ.ಜಯರಾಂ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…
ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…