ಮಂಡ್ಯ

ಮಂಡ್ಯ : ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈತರ ಆಗ್ರಹ

ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ.

೨೦೧೯ರಲ್ಲಿ ಶ್ರೀರಂಗಪಟ್ಟಣ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ-೨೭೫ರ ನಿರ್ಮಾಣಕ್ಕೆ ಅಗತ್ಯ ಭೂ ಸ್ವಾಧಿನಕ್ಕೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ರೈತರಿಗೆ ವಾಣಿಜ್ಯ ಉದ್ದೇಶದ ಆಮಿಷವೊಡ್ಡಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಥಳೀಯರು ಹಾಗೂ ರೈತರಿಗೆ ಅಗತ್ಯವಿರುವ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸದಿರುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನೂರಾರು ಮಂದಿ ರೈತರು, ರೈತ ಮಹಿಳೆಯರು ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾವಣೆಗೊಂಡು ಸ್ಥಳೀಯ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಿ ಸುಮಾರು ೬೫೦೦ ಕೋಟಿ ರೂ. ವೆಚ್ಚದಲ್ಲಿ ೧೦೦ ಕಿ.ಮೀ. ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿ ಭೂ ಸ್ವಾಧೀನ ಮಾಡಿಕೊಂಡಿರುವ ಹೆದ್ದಾರಿ ಪ್ರಾಧಿಕಾರ ಸ್ಥಳೀಯ ರೈತರಿಗೆ ವಂಚನೆ ಮಾಡಿದರೆ ಸಹಿಸಲಾಸಾಧ್ಯ ಹಾಗೂ ಕಾಮಗಾರಿಗೆ ತಡೆವೊಡ್ಡುವ ಆಕ್ರೋಶ ರೈತರಿಂದ ವ್ಯಕ್ತವಾಯಿತು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬಳಿ ಸರ್ವಿಸ್ ರಸ್ತೆಯ ಅಗತ್ಯತೆ ಬಗ್ಗೆ ಮನವಿ ಮಾಡಿದ ರೈತರು, ಶಾಸಕರು ಹಾಗೂ ಅಧಿಕಾರಿಗಳ ಬೇಜಾವಾಬ್ದಾರಿ ನಡವಳಿಕೆ ವಿರುದ್ದ ಆಕ್ರೋಶ ಹೊರ ಹಾಕಿದರು.
ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಸಮಸ್ಯೆಯ ಗಂಭೀರತೆ ನನಗೆ ಅರ್ಥವಾಗಿದೆ. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿತಿನ್ ಗಡ್ಕರಿ ಅವರ ಬಳಿಗೆ ಮುಂದಿನ ವಾರದಲ್ಲಿ ೨೦ ಮಂದಿ ರೈತರ ನಿಯೋಗ ಕರೆದೊಯ್ದು ಅಗತ್ಯ ಸರ್ವಿಸ್ ರಸ್ತೆ ಮಂಜೂರು ಮಾಡಿಸುವ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬೆಳಗೊಳ ಲೋಕೇಶ್, ತಾಲ್ಲೂಕು ಜಾ.ದಳ ಅಧ್ಯಕ್ಷ ದಶರಥ, ಯುವ ಘಟಕದ ಅಧ್ಯಕ್ಷ ಸಂಜಯ್, ಪಾಲಹಳ್ಳಿ ರಮೇಶ್, ಭರತ್ ಕುಮಾರ್, ಸುನೀಲ್ ಬೆಳಗೊಳ, ರಾಕೇಶ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

7 mins ago

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…

22 mins ago

ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಗ್ಯಾರಂಟಿ ಯೋಜನೆ ವಿರೋಧಿಸಿಲ್ಲ: ಸಚಿವ ಚಲುವರಾಯಸ್ವಾಮಿ

ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…

32 mins ago

ಕೊಡಗು| ಆಸ್ತಿ ವಿಚಾರಕ್ಕೆ ಕಲಹ: ಅಣ್ಣನ ಮಗನ ಮೇಲೆ ಗುಂಡಿನ ದಾಳಿ

ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…

1 hour ago

ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ: ಸಚಿವ ಮುನಿಯಪ್ಪ ಘೋಷಣೆ

ಬೆಳಗಾವಿ: ರಾಜ್ಯದಲ್ಲಿ ಶೀಘ್ರದಲ್ಲೇ ಅರ್ಹರಿಗೆ ಹೊಸ ಬಿಪಿಎಲ್‌ ಕಾರ್ಡ್‌ ವಿತರಣೆ ಮಾಡಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಎಚ್.ಮುನಿಯಪ್ಪ ಘೋಷಣೆ…

1 hour ago

ನಾಳೆ ಡೆವಿಲ್‌ ಚಿತ್ರ ರಿಲೀಸ್:‌ ಜೈಲಿನಿಂದಲೇ ಅಭಿಮಾನಿಗಳಿಗೆ ದರ್ಶನ್‌ ಸಂದೇಶ

ಬೆಂಗಳೂರು: ನಾಳೆ ನಟ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ರಿಲೀಸ್‌ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಜೈಲಿನಿಂದಲೇ ಅಭಿಮಾನಿಗಳಿಗೆ ನಟ ದರ್ಶನ್‌…

1 hour ago