Highway
ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ.
೨೦೧೯ರಲ್ಲಿ ಶ್ರೀರಂಗಪಟ್ಟಣ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ-೨೭೫ರ ನಿರ್ಮಾಣಕ್ಕೆ ಅಗತ್ಯ ಭೂ ಸ್ವಾಧಿನಕ್ಕೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ರೈತರಿಗೆ ವಾಣಿಜ್ಯ ಉದ್ದೇಶದ ಆಮಿಷವೊಡ್ಡಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಥಳೀಯರು ಹಾಗೂ ರೈತರಿಗೆ ಅಗತ್ಯವಿರುವ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸದಿರುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.
ನೂರಾರು ಮಂದಿ ರೈತರು, ರೈತ ಮಹಿಳೆಯರು ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾವಣೆಗೊಂಡು ಸ್ಥಳೀಯ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರಿ ಸುಮಾರು ೬೫೦೦ ಕೋಟಿ ರೂ. ವೆಚ್ಚದಲ್ಲಿ ೧೦೦ ಕಿ.ಮೀ. ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿ ಭೂ ಸ್ವಾಧೀನ ಮಾಡಿಕೊಂಡಿರುವ ಹೆದ್ದಾರಿ ಪ್ರಾಧಿಕಾರ ಸ್ಥಳೀಯ ರೈತರಿಗೆ ವಂಚನೆ ಮಾಡಿದರೆ ಸಹಿಸಲಾಸಾಧ್ಯ ಹಾಗೂ ಕಾಮಗಾರಿಗೆ ತಡೆವೊಡ್ಡುವ ಆಕ್ರೋಶ ರೈತರಿಂದ ವ್ಯಕ್ತವಾಯಿತು.
ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬಳಿ ಸರ್ವಿಸ್ ರಸ್ತೆಯ ಅಗತ್ಯತೆ ಬಗ್ಗೆ ಮನವಿ ಮಾಡಿದ ರೈತರು, ಶಾಸಕರು ಹಾಗೂ ಅಧಿಕಾರಿಗಳ ಬೇಜಾವಾಬ್ದಾರಿ ನಡವಳಿಕೆ ವಿರುದ್ದ ಆಕ್ರೋಶ ಹೊರ ಹಾಕಿದರು.
ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಸಮಸ್ಯೆಯ ಗಂಭೀರತೆ ನನಗೆ ಅರ್ಥವಾಗಿದೆ. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿತಿನ್ ಗಡ್ಕರಿ ಅವರ ಬಳಿಗೆ ಮುಂದಿನ ವಾರದಲ್ಲಿ ೨೦ ಮಂದಿ ರೈತರ ನಿಯೋಗ ಕರೆದೊಯ್ದು ಅಗತ್ಯ ಸರ್ವಿಸ್ ರಸ್ತೆ ಮಂಜೂರು ಮಾಡಿಸುವ ಭರವಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಬೆಳಗೊಳ ಲೋಕೇಶ್, ತಾಲ್ಲೂಕು ಜಾ.ದಳ ಅಧ್ಯಕ್ಷ ದಶರಥ, ಯುವ ಘಟಕದ ಅಧ್ಯಕ್ಷ ಸಂಜಯ್, ಪಾಲಹಳ್ಳಿ ರಮೇಶ್, ಭರತ್ ಕುಮಾರ್, ಸುನೀಲ್ ಬೆಳಗೊಳ, ರಾಕೇಶ್ ಇತರರಿದ್ದರು.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…