ಮಂಡ್ಯ

ಮಂಡ್ಯ : ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈತರ ಆಗ್ರಹ

ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ.

೨೦೧೯ರಲ್ಲಿ ಶ್ರೀರಂಗಪಟ್ಟಣ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ-೨೭೫ರ ನಿರ್ಮಾಣಕ್ಕೆ ಅಗತ್ಯ ಭೂ ಸ್ವಾಧಿನಕ್ಕೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ರೈತರಿಗೆ ವಾಣಿಜ್ಯ ಉದ್ದೇಶದ ಆಮಿಷವೊಡ್ಡಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಥಳೀಯರು ಹಾಗೂ ರೈತರಿಗೆ ಅಗತ್ಯವಿರುವ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸದಿರುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನೂರಾರು ಮಂದಿ ರೈತರು, ರೈತ ಮಹಿಳೆಯರು ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾವಣೆಗೊಂಡು ಸ್ಥಳೀಯ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಿ ಸುಮಾರು ೬೫೦೦ ಕೋಟಿ ರೂ. ವೆಚ್ಚದಲ್ಲಿ ೧೦೦ ಕಿ.ಮೀ. ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿ ಭೂ ಸ್ವಾಧೀನ ಮಾಡಿಕೊಂಡಿರುವ ಹೆದ್ದಾರಿ ಪ್ರಾಧಿಕಾರ ಸ್ಥಳೀಯ ರೈತರಿಗೆ ವಂಚನೆ ಮಾಡಿದರೆ ಸಹಿಸಲಾಸಾಧ್ಯ ಹಾಗೂ ಕಾಮಗಾರಿಗೆ ತಡೆವೊಡ್ಡುವ ಆಕ್ರೋಶ ರೈತರಿಂದ ವ್ಯಕ್ತವಾಯಿತು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬಳಿ ಸರ್ವಿಸ್ ರಸ್ತೆಯ ಅಗತ್ಯತೆ ಬಗ್ಗೆ ಮನವಿ ಮಾಡಿದ ರೈತರು, ಶಾಸಕರು ಹಾಗೂ ಅಧಿಕಾರಿಗಳ ಬೇಜಾವಾಬ್ದಾರಿ ನಡವಳಿಕೆ ವಿರುದ್ದ ಆಕ್ರೋಶ ಹೊರ ಹಾಕಿದರು.
ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಸಮಸ್ಯೆಯ ಗಂಭೀರತೆ ನನಗೆ ಅರ್ಥವಾಗಿದೆ. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿತಿನ್ ಗಡ್ಕರಿ ಅವರ ಬಳಿಗೆ ಮುಂದಿನ ವಾರದಲ್ಲಿ ೨೦ ಮಂದಿ ರೈತರ ನಿಯೋಗ ಕರೆದೊಯ್ದು ಅಗತ್ಯ ಸರ್ವಿಸ್ ರಸ್ತೆ ಮಂಜೂರು ಮಾಡಿಸುವ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬೆಳಗೊಳ ಲೋಕೇಶ್, ತಾಲ್ಲೂಕು ಜಾ.ದಳ ಅಧ್ಯಕ್ಷ ದಶರಥ, ಯುವ ಘಟಕದ ಅಧ್ಯಕ್ಷ ಸಂಜಯ್, ಪಾಲಹಳ್ಳಿ ರಮೇಶ್, ಭರತ್ ಕುಮಾರ್, ಸುನೀಲ್ ಬೆಳಗೊಳ, ರಾಕೇಶ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಎಸ್‌ಐಆರ್: ಶಿಕ್ಷಣ ಸಂಸ್ಥೆಗಳಿಗೆ ಸೂಕ್ತ ಮಾರ್ಗದರ್ಶನ ಅಗತ್ಯ

ಎಸ್‌ಐಆರ್ ಪ್ರಕ್ರಿಯೆ ಪ್ರಾರಂಭವಾದ ನಂತರ ಮಾಧ್ಯಮಗಳಲ್ಲಿ ಕೆಲವು ಬಿಎಲ್‌ಒಗಳು ನಿವಾಸಿಗಳ ಸ್ಥಳಕ್ಕೆ ಬಾರದೆ ಅವರಿದ್ದ ಕಡೆಗೇ ಕರೆಸಿಕೊಂಡು ಕೆಲಸ ನಿರ್ವಹಿಸುವ…

3 hours ago

ಓದುಗರ ಪತ್ರ: ದಸರಾದಲ್ಲಿ ಕಂಬಳ ಬೇಕೇ?

ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ನಾಡಹಬ್ಬ ದಸರಾ ೧೬೧೦ ರಲ್ಲಿ ಪ್ರಾರಂಭವಾಗಿ, ಇಲ್ಲಿನ ಸಂಸ್ಕೃತಿಗಳನ್ನು ಅಳವಡಿಸಿಕೊಂಡು ಆಚರಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ.ಇತ್ತೀಚಿನ…

3 hours ago

ಉಪನಗರ ಯೋಜನೆ ಖಂಡಿತ ಅಭಿವೃದ್ಧಿಯಲ್ಲ

ಆರ್.ಪಿ.ವೆಂಕಟೇಶಮೂರ್ತಿ ಬೆಂಗಳೂರು ಮತ್ತು ಸುತ್ತಮುತ್ತಲಿನ ದುಃಸ್ಥಿತಿಗೆ ಎಲ್ಲ ರಾಜಕೀಯ ಪಕ್ಷಗಳ ಕೊಡುಗೆ ಇದೆ, ರಾಜಕೀಯ ನಾಯಕರು ದಯಮಾಡಿ ಆತ್ಮಾವಲೋಕನ ಮಾಡಿಕೊಳ್ಳಬೇಕು.…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಗೆದಷ್ಟು ಬಹಿರಂಗ; ರಾಮಮಂದಿರ ಕಾಣಿಕೆ ಲೂಟಿ

ಹಲವು ದಶಕಗಳ ಹೋರಾಟದಿಂದ ಎರಡೂವರೆ ವರ್ಷಗಳ ಹಿಂದೆ ನನಸಾದ ಹಿಂದುಗಳ ಧಾರ್ಮಿಕ ಶ್ರದ್ಧಾ ಕೇಂದ್ರವಾದ ಶ್ರೀರಾಮ ಮಂದಿರದಗಿರುವ ಭಕ್ತರ ಕಾಣಿಕೆಯ…

3 hours ago

ಎಸ್‌ಐಆರ್: ಮಿಶ್ರ ಪ್ರತಿಕ್ರಿಯೆ

ಕೆ.ಎಸ್.ಚಂದ್ರಶೇಖರ ಮೂರ್ತಿ ‘ಸಂವಿಧಾನಬದ್ಧ ಪ್ರಕ್ರಿಯೆ; ಕಾರ್ಯವಿಧಾನದ ಬಗ್ಗೆ ಅಸಮಾಧಾನ’ ಸಾಹಿತಿಗಳು, ಗಣ್ಯರು, ಮುಖಂಡರ ಅಭಿಪ್ರಾಯ ಮೈಸೂರು: ಭಾರತೀಯ ಚುನಾವಣಾ ಆಯೋಗದ…

3 hours ago