ಮಂಡ್ಯ

ಮಂಡ್ಯ : ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ರೈತರ ಆಗ್ರಹ

ಮಂಡ್ಯ : ಶ್ರೀರಂಗಪಟ್ಟಣ-ಕುಶಾಲನಗರ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ೨೭೫ರ ನಿರ್ಮಾಣದಲ್ಲಿ ರೈತರು, ಜನಸಾಮಾನ್ಯರು ಹಾಗೂ ಪ್ರವಾಸಿಗರ ಹಿತ ಕಡೆಗಣಿಸಿ ಸರ್ವಿಸ್ ರಸ್ತೆಗೆ ಅನುವು ಮಾಡಿಕೊಡದ ಎನ್‌ಎಚ್ ಅಧಿಕಾರಿಗಳ ಕರ್ತವ್ಯಲೋಪ ಖಂಡಿಸಿ ನೂರಾರು ರೈತರು ಅಧಿಕಾರಿಗಳ ಕಾರ್ಯವೈಖರಿ ವಿರುದ್ಧ ಸಿಡಿದೆದ್ದಿದ್ದಾರೆ.

೨೦೧೯ರಲ್ಲಿ ಶ್ರೀರಂಗಪಟ್ಟಣ- ಕುಶಾಲನಗರ ನಡುವಿನ ರಾಷ್ಟ್ರೀಯ ಹೆದ್ದಾರಿ-೨೭೫ರ ನಿರ್ಮಾಣಕ್ಕೆ ಅಗತ್ಯ ಭೂ ಸ್ವಾಧಿನಕ್ಕೆ ಮುಂದಾದ ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಸ್ಥಳೀಯ ರೈತರಿಗೆ ವಾಣಿಜ್ಯ ಉದ್ದೇಶದ ಆಮಿಷವೊಡ್ಡಿ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡು ಸ್ಥಳೀಯರು ಹಾಗೂ ರೈತರಿಗೆ ಅಗತ್ಯವಿರುವ ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಕ್ರಿಯಾಯೋಜನೆ ರೂಪಿಸದಿರುವುದು ಸರಿಯಲ್ಲ ಎಂದು ಆಕ್ರೋಶ ಹೊರ ಹಾಕಿದರು.

ನೂರಾರು ಮಂದಿ ರೈತರು, ರೈತ ಮಹಿಳೆಯರು ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ನಿರ್ಮಾಣವಾಗುತ್ತಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಜಮಾವಣೆಗೊಂಡು ಸ್ಥಳೀಯ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಿ ಸುಮಾರು ೬೫೦೦ ಕೋಟಿ ರೂ. ವೆಚ್ಚದಲ್ಲಿ ೧೦೦ ಕಿ.ಮೀ. ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಅಧಿಸೂಚನೆ ಹೊರಡಿಸಿ ಭೂ ಸ್ವಾಧೀನ ಮಾಡಿಕೊಂಡಿರುವ ಹೆದ್ದಾರಿ ಪ್ರಾಧಿಕಾರ ಸ್ಥಳೀಯ ರೈತರಿಗೆ ವಂಚನೆ ಮಾಡಿದರೆ ಸಹಿಸಲಾಸಾಧ್ಯ ಹಾಗೂ ಕಾಮಗಾರಿಗೆ ತಡೆವೊಡ್ಡುವ ಆಕ್ರೋಶ ರೈತರಿಂದ ವ್ಯಕ್ತವಾಯಿತು.

ಸ್ಥಳಕ್ಕೆ ಆಗಮಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರ ಬಳಿ ಸರ್ವಿಸ್ ರಸ್ತೆಯ ಅಗತ್ಯತೆ ಬಗ್ಗೆ ಮನವಿ ಮಾಡಿದ ರೈತರು, ಶಾಸಕರು ಹಾಗೂ ಅಧಿಕಾರಿಗಳ ಬೇಜಾವಾಬ್ದಾರಿ ನಡವಳಿಕೆ ವಿರುದ್ದ ಆಕ್ರೋಶ ಹೊರ ಹಾಕಿದರು.
ರಸ್ತೆ ನಿರ್ಮಾಣದ ಕಾಮಗಾರಿ ಪರಿಶೀಲಿಸಿದ ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಸಮಸ್ಯೆಯ ಗಂಭೀರತೆ ನನಗೆ ಅರ್ಥವಾಗಿದೆ. ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ನಿತಿನ್ ಗಡ್ಕರಿ ಅವರ ಬಳಿಗೆ ಮುಂದಿನ ವಾರದಲ್ಲಿ ೨೦ ಮಂದಿ ರೈತರ ನಿಯೋಗ ಕರೆದೊಯ್ದು ಅಗತ್ಯ ಸರ್ವಿಸ್ ರಸ್ತೆ ಮಂಜೂರು ಮಾಡಿಸುವ ಭರವಸೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಬೆಳಗೊಳ ಲೋಕೇಶ್, ತಾಲ್ಲೂಕು ಜಾ.ದಳ ಅಧ್ಯಕ್ಷ ದಶರಥ, ಯುವ ಘಟಕದ ಅಧ್ಯಕ್ಷ ಸಂಜಯ್, ಪಾಲಹಳ್ಳಿ ರಮೇಶ್, ಭರತ್ ಕುಮಾರ್, ಸುನೀಲ್ ಬೆಳಗೊಳ, ರಾಕೇಶ್ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

3 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

4 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

7 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

7 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

7 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

7 hours ago