ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. ಒಂದು ಜೊಲ್ಲೆ ಕಬ್ಬಿನಲ್ಲಿ 40 ಗಿಣ್ಣುಗಳು ಬಂದಿದ್ದು, ರೈತರಿಗೆ ಆಶ್ಚರ್ಯವಾಗಿದೆ. ಕಬ್ಬು ಕಡಿಯುವ ಕೃಷಿ ಕಾರ್ಮಿಕರನ್ನು ಸಹ ಇದು ಚಕಿತಗೊಳಿಸಿದೆ.
ಈ ಬಗ್ಗೆ ಖುಷಿ ಹಂಚಿಕೊಂಡಿರುವ ರೈತ ಶ್ರೀಕಂಠೇಗೌಡ ಅವರು, ಸಾವಯವ ಗೊಬ್ಬರಗಳಿಂದಲೇ ಈ ರೀತಿ ಕಬ್ಬು ಬೆಳೆದಿದೆ. ಯಾರೂ ಕೂಡ ಅತಿಯಾದ ರಾಸಾಯನಿಕಗಳನ್ನು ಬಳಸಬೇಡಿ ಎಂದು ಇತರ ರೈತರಿಗೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಕೃಷಿ ಸಲಹೆಗಾರ ಜಿ.ಪಿ.ಮೂರ್ತಿ ಸಲಹೆ ನೀಡಿದ್ದು, ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಬೆಳೆಗಳ ಬುಡಕ್ಕೆ ಹಾಕುವ ಮತ್ತು ಎಲೆಗಳಿಗೆ ಸಿಂಪಡಿಸುವ ಸಾವಯವ ಗೊಬ್ಬರಗಳು ಕಡಿಮೆ ಬೆಲೆಗೆ ಸಿಗಲಿದ್ದು, ರೈತರು ಅಂತಹ ಗೊಬ್ಬರಗಳನ್ನು ಬಳಸಬೇಕು. ಆಗ ಮಾತ್ರ ಪೌಷ್ಠಿಕಾಂಶ ದೊರಕುವುದಲ್ಲದೇ ಭೂಮಿಯ ಫಲವತ್ತತೆ ಹಾಳಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…