ಶ್ರೀರಂಗಪಟ್ಟಣ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ದಾಸರಗುಪ್ಪೆ ಗ್ರಾಮದ ರೈತ ಶ್ರೀಕಂಠೇಗೌಡ ಎಂಬುವವರ ಜಮೀನಿನಲ್ಲಿ ಕಬ್ಬು 23 ಅಡಿ ಎತ್ತರ ಬೆಳೆದಿದ್ದು, ಎಲ್ಲರಿಗೂ ಆಶ್ಚರ್ಯ ಮೂಡಿಸಿದೆ.
ಶ್ರೀಕಂಠೇಗೌಡ ಅವರು ಬೆಳೆದಿರುವ ವಿಸಿಎಫ್-0517 ತಳಿಯ ಕಬ್ಬು ಇದಾಗಿದ್ದು, 23 ಅಡಿ ಬೆಳೆದು ನಿಂತಿದೆ. ಒಂದು ಜೊಲ್ಲೆ ಕಬ್ಬಿನಲ್ಲಿ 40 ಗಿಣ್ಣುಗಳು ಬಂದಿದ್ದು, ರೈತರಿಗೆ ಆಶ್ಚರ್ಯವಾಗಿದೆ. ಕಬ್ಬು ಕಡಿಯುವ ಕೃಷಿ ಕಾರ್ಮಿಕರನ್ನು ಸಹ ಇದು ಚಕಿತಗೊಳಿಸಿದೆ.
ಈ ಬಗ್ಗೆ ಖುಷಿ ಹಂಚಿಕೊಂಡಿರುವ ರೈತ ಶ್ರೀಕಂಠೇಗೌಡ ಅವರು, ಸಾವಯವ ಗೊಬ್ಬರಗಳಿಂದಲೇ ಈ ರೀತಿ ಕಬ್ಬು ಬೆಳೆದಿದೆ. ಯಾರೂ ಕೂಡ ಅತಿಯಾದ ರಾಸಾಯನಿಕಗಳನ್ನು ಬಳಸಬೇಡಿ ಎಂದು ಇತರ ರೈತರಿಗೆ ಮನವಿ ಮಾಡಿದ್ದಾರೆ.
ಇನ್ನು ಈ ಬಗ್ಗೆ ಕೃಷಿ ಸಲಹೆಗಾರ ಜಿ.ಪಿ.ಮೂರ್ತಿ ಸಲಹೆ ನೀಡಿದ್ದು, ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ಫಲವತ್ತತೆ ಕಳೆದುಕೊಳ್ಳುತ್ತದೆ. ಬೆಳೆಗಳ ಬುಡಕ್ಕೆ ಹಾಕುವ ಮತ್ತು ಎಲೆಗಳಿಗೆ ಸಿಂಪಡಿಸುವ ಸಾವಯವ ಗೊಬ್ಬರಗಳು ಕಡಿಮೆ ಬೆಲೆಗೆ ಸಿಗಲಿದ್ದು, ರೈತರು ಅಂತಹ ಗೊಬ್ಬರಗಳನ್ನು ಬಳಸಬೇಕು. ಆಗ ಮಾತ್ರ ಪೌಷ್ಠಿಕಾಂಶ ದೊರಕುವುದಲ್ಲದೇ ಭೂಮಿಯ ಫಲವತ್ತತೆ ಹಾಳಾಗುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…