ಮಂಡ್ಯ: ಕಡಿಮೆ ನೀರು, ಹೆಚ್ಚು ಇಳುವರಿ ಮತ್ತು ರೋಗ ನಿರೋಧಕ ಶಕ್ತಿ ಅಧಿಕವಾಗಿರುವ ಹೊಸ ಭತ್ತದ ತಳಿಗಳನ್ನು ಬೆಳೆಯಲು ಮಂಡ್ಯ ರೈತರು ಉತ್ಸುಕರಾಗಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಭತ್ತದ ತಳಿಯನ್ನು ಪರಿಚಯಿಸಿದ್ದು, ಈಗಾಗಲೇ ಮಂಡ್ಯ ಜಿಲ್ಲೆಯ ರೈತರನ್ನು ವಿವಿಧ ಸಭೆಗಳಿಗೆ ಆಹ್ವಾನಿಸಿದೆ.
ನೀರಿನ ಲಭ್ಯತೆ, ಕೀಟ ಹಾಗೂ ರೋಗದ ತೀವ್ರತೆ ಗಮನದಲ್ಲಿಟ್ಟುಕೊಂಡು ಅಧಿಕ ಇಳುವರಿ ನೀಡುವ ಭತ್ತದ ತಳಿ ಇದಾಗಿದ್ದು, ಈ ಬಾರಿ ಮಂಡ್ಯ ಜಿಲ್ಲೆಯ ರೈತರು ಹೊಸ ತಳಿ ಭತ್ತ ಬೆಳೆಯಲು ಭಾರೀ ಉತ್ಸುಕರಾಗಿದ್ದಾರೆ.
ಇನ್ನೂ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಕೆಆರ್ಎಸ್ ಜಲಾಶಯ ಕೂಡ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ನಾಲೆಗಳಿಗೂ ಕೂಡ ಹೆಚ್ಚುವರಿಯಾಗಿ ನೀರನ್ನು ಬಿಡಲಾಗುತ್ತದೆ. ಹಾಗಾಗಿ ಮಂಡ್ಯ ಜಿಲ್ಲೆಯಲ್ಲಿ ರೈತರು ಅಧಿಕ ಇಳುವರಿ ಕೊಡುವ ಭತ್ತ ಬೆಳೆಯಲು ಅನುಕೂಲವಾಗುತ್ತದೆ.
ಈ ಹೊಸ ತಳಿ ಭತ್ತಗಳಿಂದ ರೈತರು ಉತ್ತಮ ಆದಾಯ ಗಳಿಸಲು ಅನುಕೂಲವಾಗಲಿದ್ದು, ಈ ಮೂಲಕ ಅನ್ನದಾತರ ಬದುಕು ಹಸನಾಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಂಡ್ಯ ಜಿಲ್ಲೆಯ ರೈತರ ಮೊಗದಲ್ಲಿ ಭಾರೀ ಮಂದಹಾಸ ಮನೆಮಾಡಿದೆ.
ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…
ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…
ಬೆಳಗಾವಿ: ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ…
ಬೆಳಗಾವಿ: ಶಾಸಕಾಂಗ ಪಕ್ಷದ ಸಭೆಯಲ್ಲಿ ಯಾರೂ ಕೂಡ ಗ್ಯಾರಂಟಿ ಯೋಜನೆಗಳನ್ನು ವಿರೋಧ ಮಾಡಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.…
ಕೊಡಗು: ಆಸ್ತಿ ವಿಚಾರಕ್ಕೆ ಅಣ್ಣನ ಮಗನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಕಾವಾಡಿಯಲ್ಲಿ ನಡೆದಿದೆ.…