ಮಂಡ್ಯ: ಕಡಿಮೆ ನೀರು, ಹೆಚ್ಚು ಇಳುವರಿ ಮತ್ತು ರೋಗ ನಿರೋಧಕ ಶಕ್ತಿ ಅಧಿಕವಾಗಿರುವ ಹೊಸ ಭತ್ತದ ತಳಿಗಳನ್ನು ಬೆಳೆಯಲು ಮಂಡ್ಯ ರೈತರು ಉತ್ಸುಕರಾಗಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಈ ಭತ್ತದ ತಳಿಯನ್ನು ಪರಿಚಯಿಸಿದ್ದು, ಈಗಾಗಲೇ ಮಂಡ್ಯ ಜಿಲ್ಲೆಯ ರೈತರನ್ನು ವಿವಿಧ ಸಭೆಗಳಿಗೆ ಆಹ್ವಾನಿಸಿದೆ.
ನೀರಿನ ಲಭ್ಯತೆ, ಕೀಟ ಹಾಗೂ ರೋಗದ ತೀವ್ರತೆ ಗಮನದಲ್ಲಿಟ್ಟುಕೊಂಡು ಅಧಿಕ ಇಳುವರಿ ನೀಡುವ ಭತ್ತದ ತಳಿ ಇದಾಗಿದ್ದು, ಈ ಬಾರಿ ಮಂಡ್ಯ ಜಿಲ್ಲೆಯ ರೈತರು ಹೊಸ ತಳಿ ಭತ್ತ ಬೆಳೆಯಲು ಭಾರೀ ಉತ್ಸುಕರಾಗಿದ್ದಾರೆ.
ಇನ್ನೂ ಈ ಬಾರಿ ಮುಂಗಾರು ಮಳೆ ಉತ್ತಮವಾಗಿದ್ದು, ಕೆಆರ್ಎಸ್ ಜಲಾಶಯ ಕೂಡ ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಜಲಾಶಯದಿಂದ ನಾಲೆಗಳಿಗೂ ಕೂಡ ಹೆಚ್ಚುವರಿಯಾಗಿ ನೀರನ್ನು ಬಿಡಲಾಗುತ್ತದೆ. ಹಾಗಾಗಿ ಮಂಡ್ಯ ಜಿಲ್ಲೆಯಲ್ಲಿ ರೈತರು ಅಧಿಕ ಇಳುವರಿ ಕೊಡುವ ಭತ್ತ ಬೆಳೆಯಲು ಅನುಕೂಲವಾಗುತ್ತದೆ.
ಈ ಹೊಸ ತಳಿ ಭತ್ತಗಳಿಂದ ರೈತರು ಉತ್ತಮ ಆದಾಯ ಗಳಿಸಲು ಅನುಕೂಲವಾಗಲಿದ್ದು, ಈ ಮೂಲಕ ಅನ್ನದಾತರ ಬದುಕು ಹಸನಾಗಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಮಂಡ್ಯ ಜಿಲ್ಲೆಯ ರೈತರ ಮೊಗದಲ್ಲಿ ಭಾರೀ ಮಂದಹಾಸ ಮನೆಮಾಡಿದೆ.
ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…
ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…
ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…
ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್ನ…
ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…