ಮಂಡ್ಯ: ಪಾಂಡವಪುರ ತಾಲೂಕಿನ ಆರೋಗ್ಯಾಧಿಕಾರಿಗಳ ಕಚೇರಿ ಹಿಂಬದಿಯ ವಸತಿ ಗೃಹದಲ್ಲಿ ಇತ್ತೀಚೆಗೆ ನಡೆದಿದ್ದ ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಜು. 11 ರಂದು ಮತ್ತೊಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪಾಂಡವಪುರ ತಾಲೂಕಿನ ಹಿರೇಮರಳಿ ಗ್ರಾಮದ ಸಿಂಗೇಗೌಡರ ಮಗ ಉಮೇಶ್ ಬಂಧಿತ ಆರೋಪಿ. ಇದೇ
ಪ್ರಕರಣದಲ್ಲಿ ಮತ್ತೊಬ್ಬ ಪ್ರಮುಖ ಆರೋಪಿ ಅಭಿಲಾಷ್ ಎಂಬಾತನ ಸೋದರ ಮಾವನಾಗಿರುವ ಈತ ಭ್ರೂಣ ಹತ್ಯೆಗೆ ಒಳಗಾಗುವವನ್ನು ಗುರುತಿಸಿ, ಅಬಾಷನ್ ಮಾಡಿಸುವ ಮಹಿಳೆಯರನ್ನು ಕರೆತರುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿ ಪ್ರಕರಣದಲ್ಲಿ ಈಗಾಗಲೇ ಜೈಲು ಸೇರಿರುವ ಶೃತಿ ಮತ್ತು ಆಶಾ ಅವರಿಗೆ ಮಹಿಳೆಯರನ್ನು ಪರಿಚಯಿಸಿ, ಅಬಾಷನ್ಕ್ಕೆ ಒಳಪಡಿಸುತ್ತಿದ್ದರು ಎನ್ನಲಾಗಿದೆ.
ಇತ್ತೀಚೆಗೆ ದೇವೇಗೌಡನಕೊಪ್ಪಲು ಗ್ರಾಮದ ಮಹಿಳೆಯೊಬ್ಬರಿಗೆ ತಮ್ಮ ಮನೆಯ ಕೊಠಡಿಯಲ್ಲಿ ಭ್ರೂಣ ಹತ್ಯೆ ನಡೆಸಲು ಅವಕಾಶ ಮಾಡಿಕೊಟ್ಟಿದ್ದು,ಪ್ರಕರಣದ ಜಾಡು ಹಿಡಿದು ತನಿಖೆ ನಡೆಸುತ್ತಿದ್ದ ಸಬ್ಇನ್ಸ್ಪೆಕ್ಟರ್ ಆರ್.ಬಿ.ಉಮೇಶ್ ಅವರ ತಂಡ ಆರೋಪಿಯನ್ನು ಅವರ ಸ್ವತಃ ಮನೆಯಲ್ಲೇ ದಸ್ತಗಿರಿ ಮಾಡಿ ಪ್ರಕರಣ ದಾಖಲಿಸಿ ಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ನವದೆಹಲಿ: ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಸಿಜೆಪಿ ನಡೆಸಿದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ…
ರೈಲ್ವೆ ಇಲಾಖೆಯಿಂದ ಅನುಮತಿ ಪಡೆದ ಮಾರಾಟಗಾರರು ಪ್ರತಿನಿತ್ಯ ರೈಲುಗಳಲ್ಲಿ ಕಾಫಿ, ಟೀ, ಇಡ್ಲಿ, ರೈಸ್ ಬಾತ್ ಮೊದಲಾದ ಆಹಾರ ಪದಾರ್ಥಗಳು,…
ಕರ್ನಾಟಕ ವಿದ್ಯುತ್ ಮಂಡಳಿಯು ರಾಜದ್ಯಂತ ಗೃಹ ಜ್ಯೋತಿ ಅರ್ಹ ಫಲಾನುಭವಿಗಳನ್ನು ಗುರುತಿಸಲು ಮನೆ ಬಾಗಿಲಿಗೆ ಬಂದು ಸಮೀಕ್ಷೆ ಕಾರ್ಯ ಮಾಡುತ್ತಿದೆ.…
ಕರ್ನಾಟಕದಲ್ಲಿ ಶೇ.೬೦ ಕ್ಕಿಂತ ಹೆಚ್ಚು ಮಳೆ ಕೊರತೆಯಾಗಿದ್ದು, ಮೈಸೂರು, ವಿಜಯಪುರ, ಧಾರವಾಡ, ಗದಗ, ಬೆಳಗಾವಿ, ಕೊಪ್ಪಳ, ಕಲಬುರಗಿ,ಬೀದರ್, ಹಾಸನ, ದಾವಣಗೆರೆ,…
ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಹೊಸದಿಲ್ಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ…
ಶುಭಾ ಖಟಾವಕರ ಮ್ಹೆತ್ರಸ್ ಸುಪ್ರೀಂ ಕೋರ್ಟ್ನಲ್ಲಿ ಸ್ವತಃ ಅಟಾರ್ನಿ ಜನರಲ್ ಹೇಳಿಕೆ! ೨೦೨೩ರ ನಂತರ ತಯಾರಾದ ವಾಹನಗಳಿಗೆ ಮಾತ್ರ ಇ-೨೦…