ಮಂಡ್ಯ

ಮಂಡ್ಯ: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ

ಮಂಡ್ಯ: ಮುಂಬರುವ ಮುಂಗಾರು ಹಂಗಾಮಿನ ಕೃಷಿ ಚಟುವಟಿಕೆಗಳಿಗೆ ರೈತರಿಗೆ ಅನುಕೂಲವಾಗುವಂತೆ ಯಾವುದೇ ಅಡಚಣೆಯಿಲ್ಲದೇ ವಿವಿಧ ಬೆಳೆಗಳಿಗೆ ಅವಶ್ಯಕವಾದ ರಸಗೊಬ್ಬರಗಳನ್ನು ನಿಯಮಾನುಸಾರ ವಿತರಿಸುವುದು ಪ್ರಮುಖ ವಂಶವಾಗಿರುತ್ತದೆ.

ಮಂಡ್ಯ ಜಿಲ್ಲೆಯಲ್ಲಿ ವಿವಿಧ ಹಂಗಾಮುಗಳಲ್ಲಿ ಬೆಳೆಯಬಹುದಾದ ಬೆಳೆಗಳಿಗೆ ಬೇಕಾಗುವ ಅವಶ್ಯಕ ಪೋಷಕಾಂಶಗಳ ಆಧಾರದನ್ವಯ ಬೇಡಿಕೆ ಅನುಸಾರವಾಗಿ ಒಟ್ಟಾರೆ ರಸಗೊಬ್ಬರಗಳ ಸರಬರಾಜಿಗೆ ಕ್ರಮ ವಹಿಸಲಾಗುವುದು ಎಂದು ಮಂಡ್ಯ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ವಿವಿಧ ರಸಗೊಬ್ಬರಗಳು ಕಡಿಮೆ ಬೆಲೆಗೆ ರೈತರಿಗೆ ದೊರೆಯುವಂತೆ ಮಾಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಬ್ಸಿಡಿ ದರದಲ್ಲಿ ರೈತರಿಗೆ ಪೂರೈಕೆ ಮಾಡುತ್ತಿದೆ. ಸದರಿ ಸಹಾಯಧನದ ರಸಗೊಬ್ಬರಗಳನ್ನು ಕೃಷಿಯೇತರ ಚಟುವಟಿಕೆಗಳಿಗೆ ರೈತರ ಹೆಸರಿನಲ್ಲಿ ರಸಗೊಬ್ಬರ ಖರೀದಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದಕ್ಕೆ ಕಡಿವಾಣ ಹಾಕಲು ಮತ್ತು ರೈತರು ಸಹ ಮಿತವ್ಯಯದಿಂದ ಅವಶ್ಯಕತೆ ಅನುಗುಣವಾಗಿ ರಸಗೊಬ್ಬರವನ್ನು ಬಳಸಲು ಇಲಾಖೆಯು ಕಡ್ಡಾಯವಾಗಿ ಎಫ್‌ಐಡಿ ಸಂಖ್ಯೆಯನ್ನು ರೈತರು ಹೊಂದಿರುವುದು ಕಡ್ಡಾಯ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

9 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

9 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

9 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

9 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

9 hours ago