ಮೋಹನ್ ಕುಮಾರ್ ಬಿ.ಟಿ
ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಕಳೆದ ಕೆಲ ದಿನಗಳ ಹಿಂದೆ ಯುವಕನಿಗೆ ಹಲ್ಲೆ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಹಲ್ಲೆಗೊಳಗಾದ ಯುವಕ ಮೈಸೂರಿನ ಟಿ.ನರಸೀಪುರದ ಯಶ್ವಂತ್ ಎಂಬುದು ಪತ್ತೆಯಾಗಿತ್ತು. ಆತನಿಂದ ದೂರು ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ದೂರು ಕೊಡುವ ಸಂದರ್ಭದಲ್ಲಿ ಹಲ್ಲೆ ಮಾಡಿದ ನಾಲ್ವರ ಹೆಸರನ್ನು ಆತ ಹೇಳಿದ್ದನು. ಈ ಪ್ರಕರಣ ಸಂಬಂಧ ಮಂಡ್ಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಮೂರು ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು. ನಿನ್ನೆ ಸಂಜೆ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಈ ವೇಳೆ ಅಲ್ಲಿ ದಾಳಿ ಮಾಡಿದ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದಿದ್ದರು. ಈ ವೇಳೆ ಸುಭಾಷ್ ಎಂಬಾತ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಅದೇ ಜಾಗದಲ್ಲಿ ಶೋಧ ಮಾಡಲಾಗುತ್ತಿತ್ತು. ಈ ವೇಳೆ ಸುಭಾಷ್ ಅಲ್ಲೇ ಇದ್ದದ್ದು ಕಂಡು ಬಂದಿತ್ತು. ಬಂಧಿಸುವಾಗ ಆತ ಪಿಎಸ್ಐ ಶೇಷಾದ್ರಿಗೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಏರ್ ಫೈರಿಂಗ್ ಮಾಡಿ ಸೂಚನೆ ನೀಡಿದ್ರೂ ಕೇಳಲಿಲ್ಲ. ಹೀಗಾಗಿ ಆತನ ಬಲಗಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆತ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಹಿತಿ ನೀಡಿದರು.
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…
ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…
ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…
ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್ಸಿ ಕೆ.ಶಿವಕುಮಾರ್ ಒತ್ತಾಯಿಸಿದ್ದಾರೆ. ಈ…
ಬೆಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…