ಮೋಹನ್ ಕುಮಾರ್ ಬಿ.ಟಿ
ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಕಳೆದ ಕೆಲ ದಿನಗಳ ಹಿಂದೆ ಯುವಕನಿಗೆ ಹಲ್ಲೆ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಹಲ್ಲೆಗೊಳಗಾದ ಯುವಕ ಮೈಸೂರಿನ ಟಿ.ನರಸೀಪುರದ ಯಶ್ವಂತ್ ಎಂಬುದು ಪತ್ತೆಯಾಗಿತ್ತು. ಆತನಿಂದ ದೂರು ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ದೂರು ಕೊಡುವ ಸಂದರ್ಭದಲ್ಲಿ ಹಲ್ಲೆ ಮಾಡಿದ ನಾಲ್ವರ ಹೆಸರನ್ನು ಆತ ಹೇಳಿದ್ದನು. ಈ ಪ್ರಕರಣ ಸಂಬಂಧ ಮಂಡ್ಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಮೂರು ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು. ನಿನ್ನೆ ಸಂಜೆ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು. ಈ ವೇಳೆ ಅಲ್ಲಿ ದಾಳಿ ಮಾಡಿದ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದಿದ್ದರು. ಈ ವೇಳೆ ಸುಭಾಷ್ ಎಂಬಾತ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಅದೇ ಜಾಗದಲ್ಲಿ ಶೋಧ ಮಾಡಲಾಗುತ್ತಿತ್ತು. ಈ ವೇಳೆ ಸುಭಾಷ್ ಅಲ್ಲೇ ಇದ್ದದ್ದು ಕಂಡು ಬಂದಿತ್ತು. ಬಂಧಿಸುವಾಗ ಆತ ಪಿಎಸ್ಐ ಶೇಷಾದ್ರಿಗೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಏರ್ ಫೈರಿಂಗ್ ಮಾಡಿ ಸೂಚನೆ ನೀಡಿದ್ರೂ ಕೇಳಲಿಲ್ಲ. ಹೀಗಾಗಿ ಆತನ ಬಲಗಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆತ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಹಿತಿ ನೀಡಿದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…