ಮಂಡ್ಯ

ಆರೋಪಿ ಕಾಲಿಗೆ ಫೈರಿಂಗ್ ಪ್ರಕರಣ: ಮಂಡ್ಯದಲ್ಲಿ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಮಾಹಿತಿ

ಮೋಹನ್‌ ಕುಮಾರ್‌ ಬಿ.ಟಿ 

ಮಂಡ್ಯ: ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು, ಕಳೆದ ಕೆಲ ದಿನಗಳ ಹಿಂದೆ ಯುವಕನಿಗೆ ಹಲ್ಲೆ ಮಾಡುವ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ಫುಲ್‌ ವೈರಲ್ ಆಗಿತ್ತು. ಆದರೆ ಈ ಬಗ್ಗೆ ಯಾವುದೇ ದೂರು ದಾಖಲಾಗಿರಲಿಲ್ಲ. ಹಲ್ಲೆಗೊಳಗಾದ ಯುವಕ ಮೈಸೂರಿನ ಟಿ.ನರಸೀಪುರದ ಯಶ್ವಂತ್ ಎಂಬುದು ಪತ್ತೆಯಾಗಿತ್ತು. ಆತನಿಂದ ದೂರು ತೆಗೆದುಕೊಂಡು ಪ್ರಕರಣ ದಾಖಲು ಮಾಡಿಕೊಳ್ಳಲಾಗಿತ್ತು.
ದೂರು ‌ಕೊಡುವ‌ ಸಂದರ್ಭದಲ್ಲಿ ಹಲ್ಲೆ ಮಾಡಿದ ನಾಲ್ವರ ಹೆಸರನ್ನು ಆತ ಹೇಳಿದ್ದನು. ಈ ಪ್ರಕರಣ ಸಂಬಂಧ ಮಂಡ್ಯ ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆಗೆ ಮೂರು ಪ್ರತ್ಯೇಕ ತಂಡವನ್ನು ರಚಿಸಲಾಗಿತ್ತು‌. ನಿನ್ನೆ ಸಂಜೆ ಮಂಡ್ಯ ತಾಲ್ಲೂಕಿನ ಬಿ.ಹೊಸೂರು ಬಳಿ ಆರೋಪಿಗಳು ಅಡಗಿರುವ ಮಾಹಿತಿ ಲಭ್ಯವಾಗಿತ್ತು‌. ಈ ವೇಳೆ ಅಲ್ಲಿ ದಾಳಿ ಮಾಡಿದ ಪೊಲೀಸರು ನಾಲ್ಕು ಮಂದಿಯನ್ನ ವಶಕ್ಕೆ ಪಡೆದಿದ್ದರು. ಈ ವೇಳೆ ಸುಭಾಷ್ ಎಂಬಾತ ಅಲ್ಲಿಂದ ‌ತಪ್ಪಿಸಿಕೊಂಡು ಪರಾರಿಯಾಗಿದ್ದ. ಇಂದು ಬೆಳಿಗ್ಗೆ ಮತ್ತೆ ಅದೇ ಜಾಗದಲ್ಲಿ ‌ಶೋಧ ಮಾಡಲಾಗುತ್ತಿತ್ತು. ಈ ವೇಳೆ ಸುಭಾಷ್ ಅಲ್ಲೇ ಇದ್ದದ್ದು‌ ಕಂಡು ಬಂದಿತ್ತು. ಬಂಧಿಸುವಾಗ ಆತ ಪಿಎಸ್ಐ ಶೇಷಾದ್ರಿಗೆ ಕಲ್ಲಿನಿಂದ ಹಲ್ಲೆ ನಡೆಸಲು ಮುಂದಾಗಿದ್ದ. ಈ ವೇಳೆ ಏರ್ ಫೈರಿಂಗ್ ಮಾಡಿ ಸೂಚನೆ ನೀಡಿದ್ರೂ ಕೇಳಲಿಲ್ಲ. ಹೀಗಾಗಿ ಆತನ ಬಲಗಾಲಿಗೆ ಫೈರಿಂಗ್ ಮಾಡಿ ವಶಕ್ಕೆ ಪಡೆಯಲಾಗಿದೆ. ಸದ್ಯ ಆತ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಮಾಹಿತಿ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

53 mins ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

2 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

2 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

2 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

2 hours ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

2 hours ago