Categories: ಮಂಡ್ಯ

ಮಂಡ್ಯ| ನ.19ರಂದು ಪರಿಶಿಷ್ಟರ ಸಮಸ್ಯೆ ಕುರಿತ ಮೊದಲ ದುಂಡು ಮೇಜಿನ ಸಭೆ

ಮಂಡ್ಯ: ಜಿಲ್ಲೆಯ ಪರಿಶಿಷ್ಟ ಜಾತಿ ವರ್ಗದ ಜನರಿಗೆ ಇರುವ ಸಮಸ್ಯೆಗಳು ಮತ್ತು ಪರಿಹಾರಗಳ ಸಂಬಂಧ ಮೊದಲ ಜಿಲ್ಲಾ ಮಟ್ಟದ ಮೂಲ ಭಾರತೀಯರ ಪ್ರಥಮ ದುಂಡು ಮೇಜಿನ ಸಭೆಯ ಪೂರ್ವಭಾವಿ ಸಭೆಯನ್ನು ನವೆಂಬರ್.19ರ ಬೆಳಿಗ್ಗೆ 11 ಗಂಟೆಗೆ ನಗರದ ಪ್ರವಾಸಿ ಮಂದಿರದಲ್ಲಿ ಏರ್ಪಡಿಸಲಾಗಿದೆ ಎಂದು ಡಾ.ಬಿ.ಆರ್.ಅಂಬೇಡ್ಕರ್ ವಾರಿಯರ್‍ಸ್‌ನ ಅಧ್ಯಕ್ಷ ಗಂಗರಾಜ್ ಹನಕೆರೆ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಾಲೂಕಿನ ಹನಕೆರೆ ಗ್ರಾಮದಲ್ಲಿ ಕಾಲಭೈರೇಶ್ವರ ದೇವಸ್ಥಾನಕ್ಕೆ ಪರಿಶಿಷ್ಠರ ಪ್ರವೇಶ ಕಾರ್ಯಕ್ರಮದ ಸಂಬಂಧ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ನೇತೃತ್ವದಲ್ಲಿ ಶಾಂತಿ ಸಭೆ ನಡೆಸಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ.

ಕೆಲವು ಕಿಡಿಗೇಡಿಗಳ ಕುಕೃತ್ಯದಿಂದ ಇಂತಹ ಘಟನೆ ನಡೆದಿದ್ದು, ಸವರ್ಣೀಯರೊಂದಿಗೆ ಯಾವುದೇ ಘರ್ಷಣೆ ನಡೆದಿಲ್ಲ. ಈ ನಿಟ್ಟಿನಲ್ಲಿ ಬುದ್ದ ಸಂದೇಶ ಸಾರುವ ಹಿನ್ನಲೆ ಭಾರತೀಯರ ನಡೆ, ಬುದ್ದನ ಕಡೆ ಎಂಬ ಕಾರ್ಯಕ್ರಮ ಹಮ್ಮಿಕೊಳ್ಳಲು ಸದರಿ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಮಾಡಿ, ಮಂಡ್ಯ ನಗರ ಅಂಬೇಡ್ಕರ್ ಪುತ್ತಳಿಯಿಂದ ಹನಕೆರೆವರೆಗೆ ಪಾದಯಾತ್ರೆ ನಡೆಸಲಾಗುವುದು ಎಂದು ಹೇಳಿದರು.

ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಮಾತನಾಡಿ, ಹನಕೆರೆಯಲ್ಲಿ ನಡೆದ ಘಟನೆ ಬೆರಳೆನಿಕೆಯಷ್ಟು ಮಂದಿ ಮಾಡಿದ ಕುಚೇಸ್ಟೆ ಇದಾಗಿದ್ದು, ಅನಾಗರೀಕತೆಯಿಂದ ಪ್ರಬುದ್ಧತೆಯೆಡೆಗೆ ನಡೆಯುವ ಹಿನ್ನಲೆ ಕಾಲು ನಡಿಗೆ ಜಾಥ ಹಮ್ಮಿಕೊಳ್ಳಲು ನಿರ್ಣಯಿಸಲು ಸಭೆ ಆಯೋಜಿಸಿದ್ದು, ಸದರಿ ಕಾರ್ಯಕ್ರಮಕ್ಕೆ ಜಿಲ್ಲೆಯ ಪ್ರಗತಿ ಪರ ಚಿಂತಕರು ಆಗಮಿಸುವಂತೆ ಮನವಿ ಮಾಡಿದರು.

ಹನಕೆರೆ ಗ್ರಾಮದ ಮುಖಂಡ ಅಭಿ ಹನಕೆರೆ ಮಾತನಾಡಿ, ಹನಕೆರೆ ಘಟನೆ ವಿಚಾರವಾಗಿ ಯಾರು ವಿಚಲಿತರಾಗಬೇಕಾದ ಅವಶ್ಯಕೆಯಿಲ್ಲ, ಹನಕೆರೆಯಲ್ಲಿ ಎಲ್ಲ ಸಮುದಾಯ ಒಟ್ಟಾಗಿದ್ದು, ಹನಕೆರೆಯ ಮೂಲಕ ದೇಶಕ್ಕೆ ಏಕತೆಯ ಶಾಂತಿ ಸಂದೇಶ ರವಾನಿಸಲಿ. ಈ ಕಾರ್ಯಕ್ಕೆ ಕಾಲಭೈರೇಶ್ವರ ದೇವಸ್ಥಾನ ಸಮಿತಿ ಪರವಾಗಿ ಬೆಂಬಲವಿದೆ ಎಂದು ತಿಳಿಸಿದರು.

ಗೋಷ್ಠಿಯಲ್ಲಿ ಸ್ವಾಭಿಮಾನಿ ಸಮಾಜದ ರಾಜ್ಯಾಧ್ಯಕ್ಷ ಹೆಚ್.ಎನ್.ನರಸಿಂಹಮೂರ್ತಿ, ಟಿಪ್ಪು ಚಾರಿಟೆಬಲ್ ಟ್ರಸ್ಟ್‌ನ ಅಧ್ಯಕ್ಷ ಅಮ್ಜದ್ ಪಾಷ, ವಕೀಲ ಜೆ.ರಾಮಯ್ಯ, ಮೋಹನ್, ದೇವಯ್ಯ ಇತರರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಖ್ಯಾತ ಗಾಯಕಿ ಎಸ್.ಜಾನಕಿ ನಿಧನ

ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…

2 hours ago

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

5 hours ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

6 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

6 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

6 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

7 hours ago