ಮಂಡ್ಯ

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ ಚಿನ್ನ, 1.3 ಕೆ.ಜಿ ಬೆಳ್ಳಿ, ಪ್ಯಾಸೆಂಜರ್ ಆಟೋ, ಒಂದು ಬೈಕ್, 20 ಸಾವಿರ ನಗದು ಸೇರಿ 86 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ತಾಲ್ಲೂಕು ಹಾರೋಹಳ್ಳಿಯಲ್ಲಿ ಹಂದಿ ಸಾಕಣೆ ಮಾಡುತ್ತಿದ್ದ ಪಿ.ಗಣೇಶ (30), ಟಿ.ನರಸೀಪುರ ತಾಲೂಕು ಚಾಮನಹಳ್ಳಿಯ ಸಿ.ಎನ್.ಮಂಜುನಾಥ ಉ. ಮಂಜ, ಮೈಸೂರು ತಾಲ್ಲೂಕು ರಮ್ಮನಹಳ್ಳಿಯ ಸಾಗರ್, ದರ್ಶನ್, ಬೆಂಗಳೂರು ಸುಂಕದ ಕಟ್ಟೆ ಚಂದನ ಬಡಾವಣೆ ನಿವಾಸಿ ಕಾಂತರಾಜು ಅಲಿಯಾಸ್ ಮೋರಿ ಕಾಂತ ಬಂಽತ ಆರೋಪಿಗಳು ಎಂದು ಮಾಹಿತಿ ನೀಡಿದರು.

ಪಾಂಡವಪುರ ತಾಲ್ಲೂಕಿನ ಶಂಭೂನಹಳ್ಳಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಪಿ.ಗಣೇಶ ದ್ವಿಚಕ್ರವಾಹನವನ್ನು ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ನಿಂತಿದ್ದಾಗ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಿಸಿದಾಗ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ, ಕಗ್ಗಲೀಪುರ, ಗ್ರಾಮಾಂತರ ಪೊಲೀಸ್ ಠಾಣೆ, ಜಯಪುರ ಪೊಲೀಸ್ ಠಾಣೆ ಹಾಗೂ ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 9 ಪ್ರಕರಣಗಳಲ್ಲಿ 274.08 ಗ್ರಾಂ ತೂಕದ ಚಿನ್ನದ ಒಡವೆಗಳು, 842 ಬೆಳ್ಳಿ ಸಾಮಾನುಗಳು, 20 ಸಾವಿರ ರೂ. ನಗದು, 1 ಆಟೋರಿಕ್ಷಾ, ಒಂದು ಬೈಕ್ ಸೇರಿ 44.85 ಲಕ್ಷ ರೂ.. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.

ಮೈಸೂರು ತಾಲ್ಲೂಕು ಹಾರೋಹಳ್ಳಿಯ ಪಿ.ಗಣೇಶ ತನ್ನ ಸ್ನೇಹಿತರಾದ ಮಂಜುನಾಥ, ಸಾಗರ, ದರ್ಶನ್ ಜೊತೆ ಸೇರಿಕೊಂಡು ಅರಕೆರೆ, ಮದ್ದೂರು, ಶ್ರೀರಂಗಪಟ್ಟಣ, ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಒಟ್ಟು 212 ಗ್ರಾಂ ತೂಕದ ಚಿನ್ನದ ಆಭರಣಗಳು, 78 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಸೇರಿ 31.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅದೇ ರೀತಿ ಮೇಲುಕೋಟೆ, ಮದ್ದೂರು, ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವೆಸಗಿದ್ದ ಕಾಂತರಾಜು ಅಲಿಯಾಸ್ ಮೋರಿ ಕಾಂತ (50) ಎಂಬಾತನನ್ನು ಬಂಧಿಸಿ 65.8 ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು 379.6 ಗ್ರಾಂ ಬೆಳ್ಳಿ ಸಾಮಗ್ರಿಗಳು9.95 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಶ್ರೀರಂಗಪಟ್ಟಣ ಉಪವಿಭಾಗದ ಡಿವೈಎಸ್ಪಿ ಯು.ಡಿ.ಕೃಷ್ಣಕುಮಾರ್, ಉಪವಿಭಾಗದ ಅಪರಾಧ ಪತ್ತೆ ದಳದ ಉಸ್ತುವಾರಿ ಅಜ್ಞಕಾರಿ ಹೆಚ್.ಪಿ.ಶರತ್‌ಕುಮಾರ್, ಪಿಎಸ್‌ಐ ಆರ್.ಬಿ.ಉಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

17 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

17 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

17 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

17 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

17 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

2 days ago