ಮಂಡ್ಯ

ಮಂಡ್ಯ | ಐವರು ಅಂತರ್‌ ಜಿಲ್ಲಾ ಕಳ್ಳರ ಬಂಧನ

ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ ಚಿನ್ನ, 1.3 ಕೆ.ಜಿ ಬೆಳ್ಳಿ, ಪ್ಯಾಸೆಂಜರ್ ಆಟೋ, ಒಂದು ಬೈಕ್, 20 ಸಾವಿರ ನಗದು ಸೇರಿ 86 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿ.ಜೆ.ಶೋಭಾರಾಣಿ ತಿಳಿಸಿದರು.

ಶುಕ್ರವಾರ ತಮ್ಮ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ತಾಲ್ಲೂಕು ಹಾರೋಹಳ್ಳಿಯಲ್ಲಿ ಹಂದಿ ಸಾಕಣೆ ಮಾಡುತ್ತಿದ್ದ ಪಿ.ಗಣೇಶ (30), ಟಿ.ನರಸೀಪುರ ತಾಲೂಕು ಚಾಮನಹಳ್ಳಿಯ ಸಿ.ಎನ್.ಮಂಜುನಾಥ ಉ. ಮಂಜ, ಮೈಸೂರು ತಾಲ್ಲೂಕು ರಮ್ಮನಹಳ್ಳಿಯ ಸಾಗರ್, ದರ್ಶನ್, ಬೆಂಗಳೂರು ಸುಂಕದ ಕಟ್ಟೆ ಚಂದನ ಬಡಾವಣೆ ನಿವಾಸಿ ಕಾಂತರಾಜು ಅಲಿಯಾಸ್ ಮೋರಿ ಕಾಂತ ಬಂಽತ ಆರೋಪಿಗಳು ಎಂದು ಮಾಹಿತಿ ನೀಡಿದರು.

ಪಾಂಡವಪುರ ತಾಲ್ಲೂಕಿನ ಶಂಭೂನಹಳ್ಳಿ ರಸ್ತೆಯ ಅರಣ್ಯ ಇಲಾಖೆ ಕಚೇರಿ ಬಳಿ ಪಿ.ಗಣೇಶ ದ್ವಿಚಕ್ರವಾಹನವನ್ನು ನಿಲ್ಲಿಸಿಕೊಂಡು ಅನುಮಾನಾಸ್ಪದವಾಗಿ ನಿಂತಿದ್ದಾಗ ಆತನನ್ನು ವಶಕ್ಕೆ ತೆಗೆದುಕೊಂಡು ವಿಚಾರಿಸಿದಾಗ ಶ್ರೀರಂಗಪಟ್ಟಣ ತಾಲ್ಲೂಕು ಅರಕೆರೆ, ಕಗ್ಗಲೀಪುರ, ಗ್ರಾಮಾಂತರ ಪೊಲೀಸ್ ಠಾಣೆ, ಜಯಪುರ ಪೊಲೀಸ್ ಠಾಣೆ ಹಾಗೂ ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ 9 ಪ್ರಕರಣಗಳಲ್ಲಿ 274.08 ಗ್ರಾಂ ತೂಕದ ಚಿನ್ನದ ಒಡವೆಗಳು, 842 ಬೆಳ್ಳಿ ಸಾಮಾನುಗಳು, 20 ಸಾವಿರ ರೂ. ನಗದು, 1 ಆಟೋರಿಕ್ಷಾ, ಒಂದು ಬೈಕ್ ಸೇರಿ 44.85 ಲಕ್ಷ ರೂ.. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.

ಮೈಸೂರು ತಾಲ್ಲೂಕು ಹಾರೋಹಳ್ಳಿಯ ಪಿ.ಗಣೇಶ ತನ್ನ ಸ್ನೇಹಿತರಾದ ಮಂಜುನಾಥ, ಸಾಗರ, ದರ್ಶನ್ ಜೊತೆ ಸೇರಿಕೊಂಡು ಅರಕೆರೆ, ಮದ್ದೂರು, ಶ್ರೀರಂಗಪಟ್ಟಣ, ಕಿರುಗಾವಲು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿದ್ದ ಒಟ್ಟು 212 ಗ್ರಾಂ ತೂಕದ ಚಿನ್ನದ ಆಭರಣಗಳು, 78 ಗ್ರಾಂ ತೂಕದ ಬೆಳ್ಳಿಯ ಪದಾರ್ಥಗಳು ಸೇರಿ 31.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.

ಅದೇ ರೀತಿ ಮೇಲುಕೋಟೆ, ಮದ್ದೂರು, ಪಾಂಡವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನವೆಸಗಿದ್ದ ಕಾಂತರಾಜು ಅಲಿಯಾಸ್ ಮೋರಿ ಕಾಂತ (50) ಎಂಬಾತನನ್ನು ಬಂಧಿಸಿ 65.8 ಗ್ರಾಂ ತೂಕದ ಚಿನ್ನದ ಒಡವೆಗಳು ಮತ್ತು 379.6 ಗ್ರಾಂ ಬೆಳ್ಳಿ ಸಾಮಗ್ರಿಗಳು9.95 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ಹೇಳಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ, ಶ್ರೀರಂಗಪಟ್ಟಣ ಉಪವಿಭಾಗದ ಡಿವೈಎಸ್ಪಿ ಯು.ಡಿ.ಕೃಷ್ಣಕುಮಾರ್, ಉಪವಿಭಾಗದ ಅಪರಾಧ ಪತ್ತೆ ದಳದ ಉಸ್ತುವಾರಿ ಅಜ್ಞಕಾರಿ ಹೆಚ್.ಪಿ.ಶರತ್‌ಕುಮಾರ್, ಪಿಎಸ್‌ಐ ಆರ್.ಬಿ.ಉಮೇಶ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

ಆಂದೋಲನ ಡೆಸ್ಕ್

Recent Posts

ಪರಿಷತ್‌ ಚುನಾವಣೆಯಲ್ಲಿ ಕ್ರಾಸ್‌ ವೋಟ್‌ ಮಾಡಿದ ಶಾಸಕರು ಗೊತ್ತಿದೆ ; ಎಚ್‌.ಡಿ.ಕುಮಾರಸ್ವಾಮಿ

ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…

18 mins ago

ಜೂನ್‌ 21ರಂದು ನೀಟ್‌ ಮರುಪರೀಕ್ಷೆ ; ಮೈಸೂರು ಜಿಲ್ಲೆಯಲ್ಲಿ 7886 ಪರೀಕ್ಷಾರ್ಥಿಗಳ ನೋಂದಣಿ

ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…

56 mins ago

ನೀಟ್‌ಗಾಗಿ ಟೆಲಿಗ್ರಾಂ ನಿಷೇಧ ; ಕೇಂದ್ರದ ನಿರ್ಧಾರ ಎತ್ತಿ ಹಿಡಿದ ಕೋರ್ಟ್‌

ಹೊಸದಿಲ್ಲಿ : ನೀಟ್‌-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…

2 hours ago

ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ ; ಡಾ.ಎಚ್.ಸಿ.ಮಹದೇವಪ್ಪ

ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…

3 hours ago

ಮೈಸೂರು | ಠಾಣಾ ಮಟ್ಟದಲ್ಲಿ ರೌಡಿ ಪ್ರತಿಬಂಧಕ ದಳ ಸ್ಥಾಪನೆ

ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…

11 hours ago

ಮೈಸೂರು ʼಜಯದೇವʼಕ್ಕೆ ಹೃದಯ ಬಿರಿಯುವಷ್ಟು ಒತ್ತಡ

ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…

11 hours ago