ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ ಘಟಕದಲ್ಲಿಯೇ ತಯಾರಿಸಿ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ ಹೆಚ್ ಕೃಷ್ಣತಿಳಿಸಿದರು.
ಕಳೆದ ಬಾರಿ ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಭೇಟಿ ನೀಡಿ ಜಿಲ್ಲೆಯಲ್ಲಿರುವ ನ್ಯೂನ್ಯತೆಗಳನ್ನು ಕಂಡುಹಿಡಿದು ಪರಿಶೀಲನೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಮಂಡ್ಯ ಮತ್ತು ದುದ್ದ ಎಂ ಎಸ್ ಪಿ ಸಿ ಘಟಕ ಬೂದನೂರಿಗೆ ಭೇಟಿ ನೀಡಿದಾಗ ಅಲ್ಲಿ ಅನೇಕ ನ್ಯೂನ್ಯತೆಗಳಿದ್ದದ್ದು ಕಾಣಿಸಿತು. ಎಷ್ಟು ಆಹಾರ ಪದಾರ್ಥಗಳನ್ನು ತರಿಸಲಾಗುತ್ತಿದೆ, ಆಹಾರ ಪ್ರಮಾಣ ಹಾಗೂ ಸರಿಯಾದ ದಾಖಲೆಗಳಿಲ್ಲದ ಕಾರಣ 5 ಮಂದಿಯನ್ನು 1 ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇಂದು ಅವರುಗಳು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಸರಿಯಾದ ವರದಿ ಹಾಗೂ ದಾಖಲಾತಿಗಳನ್ನು ಸಲ್ಲಿಸಿರುವುದರಿಂದ ಮತ್ತೆ ಇಂತಹ ತಪ್ಪುಗಳು ಮರುಕಳಿಸಬಾರದೆಂದು ತಿಳಿಸಿ ಕೆಲಸಕ್ಕೆ ಹಾಜರಾಗುವಂತೆ ಅವರಿಗೆ ಅವಕಾಶವನ್ನು ನೀಡಲಾಗಿದೆ ಎಂದರು.
ತಪ್ಪು ಎಲ್ಲರೂ ಸಹಜವಾಗಿ ಮಾಡುತ್ತಾರೆ. ಆದರೆ ಆ ತಪ್ಪನ್ನು ಪದೆ ಪದೇ ಎಸಗಬಾರದು. ತಾವು ಮಾಡಿದ ತಪ್ಪುಗಳನ್ನು ತಿದ್ದುಕೊಂಡು ಸರಿ ದಾರಿಯಲ್ಲಿ ನಡೆಯುವುದಾಗಿ ತಿಳಿಸಿದಾಗ ಅವರಿಗೆ ಮತ್ತೊಂದು ಅವಕಾಶವನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ. ಮತ್ತೆ ಇದೇ ರೀತಿಯ ತಪ್ಪುಗಳು ಕಂಡುಬಂದಲ್ಲಿ ಅವರನ್ನು ಶಾಶ್ವತವಾಗಿ ಕೆಲಸದಿಂದ ತೆಗೆಯಲಾಗುವಂತೆ ಎಚ್ಚರಿಕೆ ನೀಡಿದ್ದೇನೆ ಎಂದರು.
ಕಳೆದ ತಿಂಗಳು ಮಂಡ್ಯ ಮಿಮ್ಸ್ ನಲ್ಲಿ ಭೇಟಿ ನೀಡಿದಾಗ ಅಲ್ಲಿನ ಆಹಾರ ಘಟಕದಲ್ಲಿ ಆಹಾರವನ್ನು ತಯಾರಿಸಿ ರೋಗಿಗಳಿಗೆ ನೀಡುವಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ತಿಳಿಸಲಾಗಿತ್ತು. ಈ ಸಂಬಂಧ ಇಲಾಖೆಯು ಟೆಂಡರ್ ಕರೆಯಲಾಗಿದ್ದು, ಪ್ರಕ್ರಿಯೆ ಹಂತದಲ್ಲಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳನ್ನೊಳಗೊಡಂತೆ ಸಭೆ ನಡೆಸಲಾಗುವುದು ಎಂದರು.
ಪತ್ರಿಕಾ ಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಪಿ ಎಸ್ ಆಶಾ, ಮಂಡ್ಯ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ ಕೆ ಕುಮಾರಸ್ವಾಮಿ, ಮಾಜಿ ನಗರಸಭೆ ಸದಸ್ಯ ಅಮ್ಜದ್ ಪಾಷಾ, ಮುಖಂಡರಾದ ಸೋಮು ಉಪಸ್ಥಿತರಿದ್ದರು.
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…
ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…
ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್ಪೋಸ್ಟ್ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…