Categories: ಮಂಡ್ಯ

ಮಂಡ್ಯ: ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿಂದಲೇ ಆಹಾರ ತಯಾರಿಕೆ

ಮಂಡ್ಯ:  ಜಿಲ್ಲೆಯಲ್ಲಿ ಒಟ್ಟು 4 ಅಂಗನವಾಡಿ ಆಹಾರ ತಯಾರಿಕಾ ಘಟಕಗಳಿದ್ದು, ಇದುವರೆಗೂ ಬೇರೆ ಕಡೆಯಿಂದ ಆಹಾರವನ್ನು ತರಿಸಿಕೊಂಡು 1 ಘಟಕದಿಂದ ತಲಾ 2 ತಾಲ್ಲೂಕುಗಳ ಅಂಗನವಾಡಿಗೆ ಆಹಾರವನ್ನು ನೀಡಲಾಗುತ್ತಿತ್ತು. ಇನ್ನುಮುಂದೆ ಇಡೀ ಜಿಲ್ಲೆಯ ಪ್ರತಿಯೊಂದು ಅಂಗನವಾಡಿಗೆ ಆಹಾರ ಪದಾರ್ಥಗಳನ್ನು ಜಿಲ್ಲೆಯ ಆಹಾರ ಘಟಕದಲ್ಲಿಯೇ ತಯಾರಿಸಿ ನೀಡಲಾಗುತ್ತದೆ ಎಂದು ಕರ್ನಾಟಕ ರಾಜ್ಯ ಆಹಾರ ಆಯೋಗದ ಅಧ್ಯಕ್ಷ ಡಾ ಹೆಚ್ ಕೃಷ್ಣತಿಳಿಸಿದರು.

ಕಳೆದ ಬಾರಿ ಮಂಡ್ಯ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಭೇಟಿ ನೀಡಿ ಜಿಲ್ಲೆಯಲ್ಲಿರುವ ನ್ಯೂನ್ಯತೆಗಳನ್ನು ಕಂಡುಹಿಡಿದು ಪರಿಶೀಲನೆ ನಡೆಸಲಾಗಿತ್ತು. ಈ ನಿಟ್ಟಿನಲ್ಲಿ ಮಂಡ್ಯ ಮತ್ತು ದುದ್ದ ಎಂ ಎಸ್ ಪಿ ಸಿ ಘಟಕ ಬೂದನೂರಿಗೆ ಭೇಟಿ ನೀಡಿದಾಗ ಅಲ್ಲಿ ಅನೇಕ ನ್ಯೂನ್ಯತೆಗಳಿದ್ದದ್ದು ಕಾಣಿಸಿತು. ಎಷ್ಟು ಆಹಾರ ಪದಾರ್ಥಗಳನ್ನು ತರಿಸಲಾಗುತ್ತಿದೆ, ಆಹಾರ ಪ್ರಮಾಣ ಹಾಗೂ ಸರಿಯಾದ ದಾಖಲೆಗಳಿಲ್ಲದ ಕಾರಣ 5 ಮಂದಿಯನ್ನು 1 ತಿಂಗಳ ಕಾಲ ಅಮಾನತುಗೊಳಿಸಲಾಗಿತ್ತು. ಇಂದು ಅವರುಗಳು ತಮ್ಮ ತಪ್ಪುಗಳನ್ನು ಸರಿಪಡಿಸಿಕೊಂಡು ಸರಿಯಾದ ವರದಿ ಹಾಗೂ ದಾಖಲಾತಿಗಳನ್ನು ಸಲ್ಲಿಸಿರುವುದರಿಂದ ಮತ್ತೆ ಇಂತಹ ತಪ್ಪುಗಳು ಮರುಕಳಿಸಬಾರದೆಂದು ತಿಳಿಸಿ ಕೆಲಸಕ್ಕೆ ಹಾಜರಾಗುವಂತೆ ಅವರಿಗೆ ಅವಕಾಶವನ್ನು ನೀಡಲಾಗಿದೆ ಎಂದರು.

ತಪ್ಪು ಎಲ್ಲರೂ ಸಹಜವಾಗಿ ಮಾಡುತ್ತಾರೆ. ಆದರೆ ಆ ತಪ್ಪನ್ನು ಪದೆ ಪದೇ ಎಸಗಬಾರದು. ತಾವು ಮಾಡಿದ ತಪ್ಪುಗಳನ್ನು ತಿದ್ದುಕೊಂಡು ಸರಿ ದಾರಿಯಲ್ಲಿ ನಡೆಯುವುದಾಗಿ ತಿಳಿಸಿದಾಗ ಅವರಿಗೆ ಮತ್ತೊಂದು ಅವಕಾಶವನ್ನು ನೀಡುವುದು ನಮ್ಮ ಕರ್ತವ್ಯವಾಗಿದೆ. ಮತ್ತೆ ಇದೇ ರೀತಿಯ ತಪ್ಪುಗಳು ಕಂಡುಬಂದಲ್ಲಿ ಅವರನ್ನು ಶಾಶ್ವತವಾಗಿ ಕೆಲಸದಿಂದ ತೆಗೆಯಲಾಗುವಂತೆ ಎಚ್ಚರಿಕೆ ನೀಡಿದ್ದೇನೆ ಎಂದರು.

ಕಳೆದ ತಿಂಗಳು ಮಂಡ್ಯ ಮಿಮ್ಸ್ ನಲ್ಲಿ ಭೇಟಿ ನೀಡಿದಾಗ ಅಲ್ಲಿನ ಆಹಾರ ಘಟಕದಲ್ಲಿ ಆಹಾರವನ್ನು ತಯಾರಿಸಿ ರೋಗಿಗಳಿಗೆ ನೀಡುವಂತೆ ಹಾಗೂ ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ತಿಳಿಸಲಾಗಿತ್ತು. ಈ ಸಂಬಂಧ ಇಲಾಖೆಯು ಟೆಂಡರ್ ಕರೆಯಲಾಗಿದ್ದು, ಪ್ರಕ್ರಿಯೆ ಹಂತದಲ್ಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ಅನೇಕ ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಆಹಾರ ಇಲಾಖೆಯ ಅಧಿಕಾರಿಗಳನ್ನೊಳಗೊಡಂತೆ ಸಭೆ ನಡೆಸಲಾಗುವುದು ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರೂಪಣಾಧಿಕಾರಿ ಪಿ ಎಸ್ ಆಶಾ, ಮಂಡ್ಯ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ ಕೆ ಕುಮಾರಸ್ವಾಮಿ, ಮಾಜಿ ನಗರಸಭೆ ಸದಸ್ಯ ಅಮ್ಜದ್ ಪಾಷಾ, ಮುಖಂಡರಾದ ಸೋಮು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

12 seconds ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

2 mins ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

4 mins ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

8 mins ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

14 mins ago