ಮಂಡ್ಯ: ಒಂದೇ ಕುಟುಂಬದ ನಾಲ್ವರು ನಾಪತ್ತೆಯಾಗಿರುವ ಘಟನೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಸಾಗರ ನಲ್ಲೂರು ಫೈಲ್ ಬಡಾವಣೆಯಲ್ಲಿ ನಡೆದಿದೆ.
ಕೆ.ಆರ್.ಸಾಗರದ ನಲ್ಲೂರ್ ಗ್ರಾಮದ ಸುಬ್ಬಯ್ಯ ಎಂಬುವರ ಹಿರಿಯ ಮಗಳು ಗರ್ಭಿಣಿಯಾಗಿರುವ ಭಾವನ(22), ಈಕೆ ಮಗ ಹೇಮಂತ್, ಭಾವನ ಪತಿ ಸುರೇಶ್ (29) ಮತ್ತು ಸುಬ್ಬಯ್ಯ ರವರ ಕಿರಿಯ ಮಗಳು ಐಶ್ಚರ್ಯ(14) ಏಪ್ರಿಲ್ 15 ರಂದು ಮನೆಯಿಂದ ಹೋದವರು ನಾಪತ್ತೆಯಾಗಿದ್ದಾರೆ.
ಸುರೇಶ್ ಮೈಸೂರು ಜ್ಯೋತಿ ನಗರದ ನಿವಾಸಿಯಾಗಿದ್ದು, ಈತ ಮೈಸೂರು ನಗರ ಪಾಲಿಕೆಯಲ್ಲಿ ಪೌರ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದಾರೆ. 15 ರಂದು ಮನೆಯಲ್ಲಿ ನಾಲ್ವರು ಮಾತ್ರ ಇದ್ದು, ಬಳಿಕ ಕೆಲಸ ನಿಮಿತ್ತ ಹೋರ ಹೋಗಿದ್ದು, ಇಲ್ಲಿಯ ತನಕ ಇವರಿಗಾಗಿ ಹುಡುಕಾಟ ಮಾಡಿದರೂ ಪತ್ತೆಯಾಗದ ಕಾರಣ ತಡವಾಗಿ ದೂರು ನೀಡಿರುವುದಾಗಿ ಸುಬ್ಬಯ್ಯ ದೂರಿನಲ್ಲಿ ತಿಳಿಸಿದ್ದಾರೆ.
ಚಹರೆ :
1. ಸುರೇಶ್ 5.7 ಅಡಿ ಎತ್ತರ ಎಣ್ಣೆಗೆಂಪು ಬಣ್ಣ, ಕೋಲು ಮುಖ ಗಡ್ಡ ಬಿಟ್ಟಿದ್ದು, ಕಪ್ಪು ಬಣ್ಣದ ತುಂಬುತೋಳಿನ ಶರ್ಟ್, ನಿಲಿ ಬಣ್ಣ ಪ್ಯಾಂಟ ಧರಿಸಿದ್ದಾನೆ.
2. ಭಾವನ 5.7 ಅಡಿ ಎತ್ತರ ಸಾಧರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಕೆಂಪು ಬಣ್ಣದ ಟಾಪು, ಕಪ್ಪು ಬಣ್ಣದ ಆಂಕಲ್ ಪ್ಯಾಂಟ್ ಧರಿಸಿದ್ದಾರೆ.
3. ಹೇಮಂತ 2 ವರ್ಷ. ದುಂಡು ಮುಖ, ಗೋಧಿ ಮೈಬಣ್ಣ, ನೀಲಿ ಬಣ್ಣದ ಶರ್ಟ್ ನೀಲಿ ಬಣ್ಣದ ನಿಕ್ಕರ್ ಧರಿಸಿರುತ್ತಾನೆ.
4. ಐಶ್ಚರ್ಯ ದುಂಡು ಮುಖ 5.3 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧರಣ ಮೈಕಟ್ಟು, ಗುಲಾಬಿ ಬಣ್ಣದ ಟಾಪು ಹಾಗೂ ಗುಲಾಬಿ ಬಣ್ಣದ ಲೆಗಿನ್ಸ್ ಪ್ಯಾಂಟ್ ಧರಿಸಿದ್ದಾಳೆ.
ಇವರ ಬಗ್ಗೆ ಮಾಹಿತಿ ಸಿಕ್ಕರೆ ತಕ್ಷಣ ಕೆ.ಆರ್.ಸಾಗರ ಪೊಲೀಸ್ ಠಾಣೆ ಸಂಪರ್ಕಿಸಲು ಕೋರಲಾಗಿದೆ ಅಥವಾ ಪಿಎಸ್ಐ ಮೊ.ಸಂಖ್ಯೆ 9480804856 ಸಂಪರ್ಕಿಸಬಹುದಾಗಿದೆ.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…