ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ.
ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.
ಕೀಲಾರ ಗ್ರಾಮದ ವರ್ಕ್ಶಾಪ್ ಬಳಿ ಮಾತಿಗೆ ಮಾತು ಬಳೆಸಿದ ಗೆಳಯರ ( ಜಯಂತ್ ಮತ್ತು ಕೀರ್ತಿ) ಜಗಳ ತಾರಕಕ್ಕೇರಿದೆ. ಇದರಿಂದ ರೊಚ್ಚಿಗೆದ್ದ ಕೀರ್ತಿ ಎಂಬಾತ ಜಯಂತ್ಗೆ ಚಾಕುವಿನಿಂದ ಇರಿದಿದ್ದಾನೆ, ಕೂಡಲೇ ಆರೋಪಿ ಕೀರ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.
ರಕ್ತದ ಮಡುವಿಲ್ಲಿ ನರಳಾಡುತ್ತಿದ್ದ ಜಯಂತ್ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ, ಆದರೆ ಜಯಂತ್ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.
ಈ ಸಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





