ಮಂಡ್ಯ

ಮಂಡ್ಯ: ಸ್ನೇಹಿತರ ದಿನದಂದೇ ಗೆಳೆಯನ ಕೊಲೆ.!

ಮಂಡ್ಯ: ಕ್ಲುಲ್ಲಕ ಕಾರಣಕ್ಕೆ ಸ್ನೇಹಿತರಿಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಾಲ್ಲೂಕಿನ ಕೀಲಾರ ಗ್ರಾಮದಲ್ಲಿ ಸ್ನೇಹಿತರ ದಿನದಂದೇ ನಡೆದಿದೆ.

ಕೀಲಾರ ಗ್ರಾಮದ ಜಯಂತ್(23) ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. ಕೀರ್ತಿ ಎಂಬಾತ ಚಾಕುವಿನಿಂದ ಇರಿದು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಕೀಲಾರ ಗ್ರಾಮದ ವರ್ಕ್ಶಾಪ್ ಬಳಿ ಮಾತಿಗೆ ಮಾತು ಬಳೆಸಿದ ಗೆಳಯರ ( ಜಯಂತ್ ಮತ್ತು ಕೀರ್ತಿ) ಜಗಳ ತಾರಕಕ್ಕೇರಿದೆ. ಇದರಿಂದ ರೊಚ್ಚಿಗೆದ್ದ ಕೀರ್ತಿ ಎಂಬಾತ ಜಯಂತ್‌ಗೆ ಚಾಕುವಿನಿಂದ ಇರಿದಿದ್ದಾನೆ, ಕೂಡಲೇ ಆರೋಪಿ ಕೀರ್ತಿ ಸ್ಥಳದಿಂದ ಪರಾರಿಯಾಗಿದ್ದಾನೆ.

ರಕ್ತದ ಮಡುವಿಲ್ಲಿ ನರಳಾಡುತ್ತಿದ್ದ ಜಯಂತ್‌ನನ್ನು ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದಾರೆ, ಆದರೆ ಜಯಂತ್‌ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ.

ಈ ಸಬಂಧ ಕೆರಗೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

andolanait

Recent Posts

30 ಲಕ್ಷದ ಚಿನ್ನಾಭರಣ ಧರಿಸಿ ಮದುವೆಗೆ ಬಂದು ನಾಪತ್ತೆಯಾಗಿದ್ದ ಮಹಿಳೆ ಕುಣಿಗಲ್‌ ಗೆಳೆಯನ ಮನೆಯಲ್ಲಿ ಪತ್ತೆ

ಹಾಸನ: ಮದುವೆ ಸಮಾರಂಭಕ್ಕೆ ಲಕ್ಷಾಂತರ ರೂ ಮೌಲ್ಯದ ಒಡವೆ ಧರಿಸಿ ಬಂದಿದ್ದ ಮಹಿಳೆ ನಿಗೂಢವಾಗಿ ಕಣ್ಮರೆಯಾಗಿದ್ದ ಪ್ರಕರಣ ಸುಖಾಂತ್ಯ ಕಂಡಿದೆ.…

1 min ago

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

28 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

34 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

2 hours ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

2 hours ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

2 hours ago