ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.
ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ
ನವೆಂಬರ್ 6 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪ ತ್ರ ಸಲ್ಲಿಸಲು ನವೆಂಬರ್ 12 ಕೊನೆಯ ದಿನಾಂಕವಾಗಿರುತ್ತದೆ. ನವೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ.
ಮತದಾನದ ಅವಶ್ಯವಿದ್ದರೆ ನವೆಂಬರ್ 23 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಸಲಾಗುವುದು. ಮತ ಎಣಿಕೆ ನವೆಂಬರ್ 26 ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.
ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಹಾಗೂ ಕ್ಷೇತ್ರದ ಸಂಖ್ಯೆಯ ವಿವರ ಇಂತಿದೆ
ಮಂಡ್ಯ ತಾಲ್ಲೂಕಿನ ಕೆರಗೋಡು-3, 5-ಕೀಲಾರ-5, 1-ಹುಲಿವಾನ-1, 1-ಯಲಿಯೂರು-1, ಮದ್ದೂರು ತಾಲೂಕಿನ 5-ಅಡಗನಹಳ್ಳಿ-1, 5-ಅಡಗನಹಳ್ಳಿ-1, 6-ಅಡಗನಹಳ್ಳಿ-2, 1-ವಳಗೆರೆಹಳ್ಳಿ-1, 3-ವಳಗೆರೆಹಳ್ಳಿ-3, 5-ತೈಲೂರು-1, 5-ತೈಲೂರು-1, 2-ಗೊರವನಹಳ್ಳಿ-2, 3-ಶಿಂಘಟಗೆರೆ, 2-ಕೆ.ಶೆಟ್ಟಿಹಳ್ಳಿ-2, ಮಳವಳ್ಳಿ ತಾಲೂಕಿನಲ್ಲಿ 5-ಅಂಕನಹಳ್ಳಿ, 3-ಹೊಸಹಳ್ಳಿ-3, 5-ರಾಮನಾಥ ಮೋಳೆ, 4-ಬೆಳಕವಾಡಿ-4 ಸ್ಥಾನಗಳಲ್ಲಿ ಚುನಾವಣೆ ನಡೆಯುತ್ತದೆ.
ಪಾಂಡವಪುರ ತಾಲೂಕಿನಲ್ಲಿ 3-ಬೆಳ್ಳಾಳೆ, 2-ವಳಗೆರೆದೇವರಹಳ್ಳಿ, 3-ಹೊಸಹಳ್ಳಿ, 5-ಕುರಹಟ್ಟಿ, 3-ಬಸವನಗುಡಿಕೊಪ್ಪಲು, 6-ಹೊಸಸಾಯಪ್ಪನಹಳ್ಳಿ, ಶ್ರೀರಂಗಪಟ್ಟಣ ತಾಲೂಕಿನಲ್ಲಿ 04-ಬೆಳಗೊಳ-4, 2-ಗಾಮನಹಳ್ಳಿ, 4-ನೀಲನಕೊಪ್ಪಲು, 06-ಮರಳಗಾಲ, ನಾಗಮಂಗಲ ತಾಲೂಕಿನಲ್ಲಿ 5-ಹೊನ್ನೇನಹಳ್ಳಿ, 4-ಶಿಖರನಹಳ್ಳಿ, 8-ಅಲ್ಪಹಳ್ಳಿ, ಕೆ.ಆರ್ ಪೇಟೆ ತಾಲ್ಲೂಕಿನ 07-ಚಿಕ್ಕೋನಹಳ್ಳಿ, 05-ಕಾಮನಹಳ್ಳಿ, 10-ಪೂವನಹಳ್ಳಿ, 02-ಪುರ ಜಿಲ್ಲೆಯಲ್ಲಿ ಒಟ್ಟು 35 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಚುನಾವಣೆ ನಡೆಸಲು 30 ಚುನಾವಣಾಧಿಕಾರಿಗಳು ಹಾಗೂ 30 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.
ನೀತಿ ಸಂಹಿತೆ ಜಾರಿ
ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 6 ರಿಂದ 26 ವರೆಗೆ ಜಾರಿಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾನಗಳಿಗೆ ಚುನಾವಣೆ ನಡೆಯದ ಸಂದರ್ಭದಲ್ಲಿ ಅಥವಾ ಅವಿರೋಧ ಆಯ್ಕೆಯಾಗಿ ಚುನಾವಣಾಧಿಕಾರಿಗಳು ಫಲಿತಾಂಶ ಘೋಷಿಸಿದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ನಿಂತುಹೋಗುತ್ತದೆ.
ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ.
ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದೆ. ಗ್ರಾಮ ಪಂಚಾಯಿತಿ ಉಪ ಚುನಾವಣೆಯು ಮತಪತ್ರಗಳ ಮೂಲಕ ನಡೆಯಲಿದ್ದು, ಮತಪತ್ರದಲ್ಲಿ “NOTA” ಅವಕಾಶವಿರುವುದಿಲ್ಲ.
ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮತದಾನವು ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಮದ್ಯ ತಯಾರಿಕ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಸಂದರ್ಭಾನುಸಾರ ಅದರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.
ವಡೋದರ : 2026ರ ಮಹಿಳಾ ಪ್ರೀಮಿಯರ್ ಲೀಗ್ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ರೋಚಕವಾಗಿ…
ಹಾಸನ : ವಿಧಾನಸಭಾ ಸದನದಲ್ಲಿ ಕಾಂಗ್ರೆಸ್ ಶಾಸಕ ಶಿವಲಿಂಗೇಗೌಡ ಅವರು ಬಳಸಿದ ಅವಹೇಳನಕಾರಿ ಹಾಗೂ ಅಶ್ಲೀಲ ಪದಗಳು ರಾಜ್ಯ ವಿಧಾನಸಭೆಯ…
ಮೈಸೂರು : ಭಾರತದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆಯನ್ನು ಕರ್ನಾಟಕದ ಬಂಡೀಪುರ, ನಾಗರಹೊಳೆಯಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ.…
ಇಸ್ಲಾಮಾಬಾದ್ : ಭಾರತದ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯವನ್ನು ಬಹಿಷ್ಕರಿಸುವ ನಿರ್ಧಾರವನ್ನು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಪುನರುಚ್ಚರಿಸಿದ್ದಾರೆ. ಇಸ್ಲಾಮಾಬಾದ್ನಲ್ಲಿ…
ಬೆಂಗಳೂರು : ದೇಶದ ಅತ್ಯುನ್ನತ ಹುದ್ದೆಗಳಿಗೆ ನಡೆಯುವ ನಾಗರಿಕ ಸೇವಾ ಪರೀಕ್ಷೆಗೆ ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಅಧಿಸೂಚನೆ ಪ್ರಕಟಿಸಿದೆ.…
ನಾಪೋಕ್ಲು : ನಾಪೋಕ್ಲು ಭಾಗದ ಪಾಲೂರು ಗ್ರಾಮ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯವಂತ ಹಸುಗಳ ಕಾಲುಗಳು ಕ್ರಮೇಣ ಕೃಶಗೊಂಡು ದುರ್ಬಲಗೊಳ್ಳುತ್ತಿದ್ದು,…