ಮಂಡ್ಯ

ಮಂಡ್ಯ:ಗ್ರಾ.ಪಂ ಉಪ ಚುನಾವಣೆ, ವೇಳಾಪಟ್ಟಿ ಪ್ರಕಟ

ಮಂಡ್ಯ:ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಗ್ರಾಮ ಪಂಚಾಯಿತಿ ಸದಸ್ಯ ಸ್ಥಾನಗಳನ್ನು ಭರ್ತಿಮಾಡಲು ಉಪ ಚುನಾವಣೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಯ ಚುನಾವಣೆ ನಡೆಯುವ ವೇಳಾಪಟ್ಟಿ

ನವೆಂಬರ್ 6 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಗುವುದು. ನಾಮಪ ತ್ರ ಸಲ್ಲಿಸಲು ನವೆಂಬರ್ 12 ಕೊನೆಯ ದಿನಾಂಕವಾಗಿರುತ್ತದೆ. ನವೆಂಬರ್ 13 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನವೆಂಬರ್ 15 ರಂದು ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನಾಂಕವಾಗಿರುತ್ತದೆ.

ಮತದಾನದ ಅವಶ್ಯವಿದ್ದರೆ ನವೆಂಬರ್ 23 ರಂದು ಬೆಳಿಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆವರೆಗೆ ಮತದಾನ ನಡೆಸಲಾಗುವುದು. ಮತ ಎಣಿಕೆ ನವೆಂಬರ್ 26 ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ನಡೆಯಲಿದೆ.

ಉಪ ಚುನಾವಣೆ ನಡೆಯಲಿರುವ ಗ್ರಾಮ ಪಂಚಾಯಿತಿ ಹಾಗೂ ಕ್ಷೇತ್ರದ ಸಂಖ್ಯೆಯ ವಿವರ ಇಂತಿದೆ

ಮಂಡ್ಯ ತಾಲ್ಲೂಕಿನ ಕೆರಗೋಡು-3, 5-ಕೀಲಾರ-5, 1-ಹುಲಿವಾನ-1, 1-ಯಲಿಯೂರು-1, ಮದ್ದೂರು ತಾಲೂಕಿನ 5-ಅಡಗನಹಳ್ಳಿ-1, 5-ಅಡಗನಹಳ್ಳಿ-1, 6-ಅಡಗನಹಳ್ಳಿ-2, 1-ವಳಗೆರೆಹಳ್ಳಿ-1, 3-ವಳಗೆರೆಹಳ್ಳಿ-3, 5-ತೈಲೂರು-1, 5-ತೈಲೂರು-1, 2-ಗೊರವನಹಳ್ಳಿ-2, 3-ಶಿಂಘಟಗೆರೆ, 2-ಕೆ.ಶೆಟ್ಟಿಹಳ್ಳಿ-2, ಮಳವಳ್ಳಿ ತಾಲೂಕಿನಲ್ಲಿ 5-ಅಂಕನಹಳ್ಳಿ, 3-ಹೊಸಹಳ್ಳಿ-3, 5-ರಾಮನಾಥ ಮೋಳೆ, 4-ಬೆಳಕವಾಡಿ-4 ಸ್ಥಾನಗಳಲ್ಲಿ ಚುನಾವಣೆ ನಡೆಯುತ್ತದೆ.

ಪಾಂಡವಪುರ ತಾಲೂಕಿನಲ್ಲಿ 3-ಬೆಳ್ಳಾಳೆ, 2-ವಳಗೆರೆದೇವರಹಳ್ಳಿ, 3-ಹೊಸಹಳ್ಳಿ, 5-ಕುರಹಟ್ಟಿ, 3-ಬಸವನಗುಡಿಕೊಪ್ಪಲು, 6-ಹೊಸಸಾಯಪ್ಪನಹಳ್ಳಿ, ಶ್ರೀರಂಗಪಟ್ಟಣ ತಾಲೂಕಿನಲ್ಲಿ 04-ಬೆಳಗೊಳ-4, 2-ಗಾಮನಹಳ್ಳಿ, 4-ನೀಲನಕೊಪ್ಪಲು, 06-ಮರಳಗಾಲ, ನಾಗಮಂಗಲ ತಾಲೂಕಿನಲ್ಲಿ 5-ಹೊನ್ನೇನಹಳ್ಳಿ, 4-ಶಿಖರನಹಳ್ಳಿ, 8-ಅಲ್ಪಹಳ್ಳಿ, ಕೆ.ಆರ್ ಪೇಟೆ ತಾಲ್ಲೂಕಿನ 07-ಚಿಕ್ಕೋನಹಳ್ಳಿ, 05-ಕಾಮನಹಳ್ಳಿ, 10-ಪೂವನಹಳ್ಳಿ, 02-ಪುರ ಜಿಲ್ಲೆಯಲ್ಲಿ ಒಟ್ಟು 35 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಚುನಾವಣೆ ನಡೆಸಲು 30 ಚುನಾವಣಾಧಿಕಾರಿಗಳು ಹಾಗೂ 30 ಸಹಾಯಕ ಚುನಾವಣಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ನೀತಿ ಸಂಹಿತೆ ಜಾರಿ

ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನವೆಂಬರ್ 6 ರಿಂದ 26 ವರೆಗೆ ಜಾರಿಯಲ್ಲಿರುತ್ತದೆ. ಗ್ರಾಮ ಪಂಚಾಯಿತಿಯ ಎಲ್ಲಾ ಸ್ಥಾನಗಳಿಗೆ ಚುನಾವಣೆ ನಡೆಯದ ಸಂದರ್ಭದಲ್ಲಿ ಅಥವಾ ಅವಿರೋಧ ಆಯ್ಕೆಯಾಗಿ ಚುನಾವಣಾಧಿಕಾರಿಗಳು ಫಲಿತಾಂಶ ಘೋಷಿಸಿದಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದು ನಿಂತುಹೋಗುತ್ತದೆ.

ನೀತಿ ಸಂಹಿತೆಯು ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ನಗರ ಪಾಲಿಕೆ ಹಾಗೂ ಮಹಾನಗರ ಪಾಲಿಕೆ ಪ್ರದೇಶಗಳಿಗೆ ಅನ್ವಯವಾಗುವುದಿಲ್ಲ.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷ ರಹಿತ ಚುನಾವಣೆಯಾಗಿದೆ. ಗ್ರಾಮ ಪಂಚಾಯಿತಿ ಉಪ ಚುನಾವಣೆಯು ಮತಪತ್ರಗಳ ಮೂಲಕ ನಡೆಯಲಿದ್ದು, ಮತಪತ್ರದಲ್ಲಿ “NOTA” ಅವಕಾಶವಿರುವುದಿಲ್ಲ.

ನೀತಿ ಸಂಹಿತೆಯು ಜಾರಿಯಲ್ಲಿರುವ ಪ್ರದೇಶಗಳಲ್ಲಿ ಮತದಾನವು ಮುಕ್ತಾಯಗೊಳ್ಳುವ 48 ಗಂಟೆಗಳ ಮೊದಲಿನ ಅವಧಿಯಲ್ಲಿ ಎಲ್ಲಾ ಮದ್ಯದ ಅಂಗಡಿಗಳು ಮತ್ತು ಮದ್ಯ ತಯಾರಿಕ ಘಟಕಗಳನ್ನು ಅದರ ಮಾಲೀಕರು, ಅದಿಭೋಗದಾರರು ಸಂದರ್ಭಾನುಸಾರ ಅದರ ವ್ಯವಸ್ಥಾಪಕರು ಮುಚ್ಚತಕ್ಕದ್ದು ಎಂದು ಜಿಲ್ಲಾಧಿಕಾರಿ ಆದೇಶದಲ್ಲಿ  ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಳೆ ಕೊರತೆಯ ನಡುವೆಯೂ ಕೃಷಿಗೆ ಆತಂಕವಿಲ್ಲ

ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…

2 hours ago

ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆರೋಪ

ದಾಸೇಗೌಡ ಸರಗೂರು ಸರಗೂರು: ಸ್ಥಳ ಪರಿಶೀಲಿಸಿ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಆಗ್ರಹ ಸರಗೂರು: ಪಟ್ಟಣದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ…

2 hours ago

20 ದಿನಗಳಿಂದ ಕುಡಿಯುವ ನೀರಿಲ್ಲದೆ ಪರದಾಟ

ಮಹಾದೇಶ್ ಎಂ.ಗೌಡ ಅಧಿಕಾರಿಗಳ ವಿರುದ್ಧ ಕೌದಳ್ಳಿ ಗ್ರಾಮದ ಮಹಿಳೆಯರ ಆಕ್ರೋಶ  ಹನೂರು: ಕುಡಿಯುವ ನೀರಿಗಾಗಿ ಕಳೆದ ಹಲವು ದಿನಗಳಿಂದ ಪರಿತಪಿಸುತ್ತಿದ್ದರೂ…

2 hours ago

ಲಿಂಗಾಂಬುಧಿ ಕೆರೆ ಪ್ರವೇಶಕ್ಕೆ ಶುಲ್ಕ ನಿಗದಿ

ಚಿರಂಜೀವಿ ಸಿ ಹುಲ್ಲಹಳ್ಳಿ ಸೆಪ್ಟೆಂಬರ್ ೧ರಿಂದ ಜಾರಿ; ಮಾಸಿಕ ಪಾಸ್ ಸೌಲಭ್ಯ ವಾಯುವಿಹಾರಿಗಳ ಅಸಮಾಧಾನ ವಯಸ್ಕರಿಗೆ ೧೦ ರೂ., ಮಕ್ಕಳಿಗೆ…

2 hours ago

ಮಾಲೀಕರು ಒಪ್ಪಿದರೆ ಪರಿಹಾರ ನೀಡಿ, ಇಲ್ಲವೇ ಭೂಮಿ ಹಿಂತಿರುಗಿಸಿ

ಕೆ.ಬಿ.ರಮೇಶನಾಯಕ ಮೈಸೂರು: ಸರ್ಕಾರದ ನಿರ್ದೇಶನ ಉಲ್ಲಂಸಿ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಹಿಂದಿನ ಮುಡಾ) ಮಂಜೂರು ಮಾಡಿದ್ದ ಬದಲಿ ನಿವೇಶನಗಳ ಹಂಚಿಕೆ…

2 hours ago

ಮೈಸೂರು ಜಿಲ್ಲೆ: ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚು!

ಕೆ.ಬಿ.ರಮೇಶನಾಯಕ ಮೈಸೂರು: ೨೦೨೯ರ ಲೋಕಸಭಾ ಚುನಾವಣೆಗೂ ಮುನ್ನ ಕ್ಷೇತ್ರಗಳ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಜಾರಿಗೆ ಕೇಂದ್ರ ಸರ್ಕಾರ ಪ್ರಯತ್ನ…

2 hours ago