ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತಪಡಿಸಿ ಮೃತ ಗೃಹಿಣಿಯ ಪೋಷಕರು ಪತಿಯ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.
ಗ್ರಾಮದ ಬ್ಯಾಟೇಗೌಡನ ಪತ್ನಿ ನಾಗವೇಣಿ (೨೪) ಮೃತ ಗೃಹಿಣಿಯಾಗಿದ್ದು, ಗಂಡ ಬ್ಯಾಟೇಗೌಡ ಮಗಳಿಗೆ ವರದಕ್ಷಿಣೆ ಕಿರುಕುಳ ನೀಡಿ, ಹತ್ಯೆಗೈದು ನೀರಿನ ಕೊಳದಲ್ಲಿ ಹಾಕಿದ್ದಾನೆ ಎಂದು ಪೋಷಕರು ಶಿವಳ್ಳಿ ಠಾಣಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ.
ಕೊಳದಿಂದ ಮೃತ ನಾಗವೇಣಿ ಅವರ ದೇಹವನ್ನು ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಮಿಮ್ಸ್ ಆಸ್ಪತ್ರೆಗೆ ರವಾನಿಸಿ, ಪಂಚನಾಮೆ ಬಳಿಕ ಮೃತಳ ವಾರಸುದಾರಿಗೆ ಮೃತ ದೇಹವನ್ನು ಹಸ್ತಾಂತರಿಸಿದರು.
ಪ್ರಕರಣ ದಾಖಲಿಸಿಕೊಂಡಿರುವ ಶಿವಳ್ಳಿ ಠಾಣಾ ಪೊಲೀಸರು ಆರೋಪಿ ಪತಿ ಬ್ಯಾಟೇಗೌಡನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…