12 year boy suicide
ಮಂಡ್ಯ : ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿದ್ದ ಪತಿಗೆ ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ತಾಲ್ಲೂಕಿನ ಯಲಿಯೂರು ವೃತ್ತದ ಬಳಿ ವಾಸವಾಗಿದ್ದ ರಾಮಚಂದ್ರ ಎಂಬವರು ಶಿಕ್ಷೆಗೊಳಗಾದ ಆರೋಪಿಯಾಗಿದ್ದು, ಈತನ ಪತ್ನಿ ಮನುಜ ಎಂಬವರನ್ನು ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆಗೈದಿದ್ದನು.
ಘಟನೆ ವಿವರ
ಆರೋಪಿ ರಾಮಚಂದ್ರ ಯಲಿಯೂರು ಸರ್ಕಲ್ನಲ್ಲಿರುವ ತನ್ನ ಮನೆಯ ಬಳಿ ಕೋಳಿ ಫಾರಂ ಇಟ್ಟುಕೊಂಡು ಪತ್ನಿ ಮನುಜ ಹಾಗೂ ಮಗನೊಂದಿಗೆ ವಾಸವಾಗಿದ್ದನು. ಈತ ಪತ್ನಿ ಬೇರೊಬ್ಬನನ್ನು ಪ್ರೀತಿಸಿ ಆತನೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಈ ಬಗ್ಗೆ ವಿಚಾರ ತಿಳಿದ ರಾಮಚಂದ್ರ ಪತ್ನಿಗೆ ಹಲವು ಬಾರಿ ತಿಳಿವಳಿಕೆ ಹೇಳಿದ್ದ. ಆದರೂ ಆಕೆ ತನ್ನ ಅಕ್ರಮ ಸಂಬಂಧವನ್ನು ಮುಂದುವರಿಸಿದ್ದಳು. ಇದರಿಂದ ಕೋಪಗೊಂಡ ರಾಮಚಂದ್ರ 2023ರ ಮೇ 4 ರಂದು ಆಕೆಯೊಂದಿಗೆ ಜಗಳ ತೆಗೆದು ಹಲ್ಲೆ ನಡೆಸಿ ಆಕೆಯ ಕುತ್ತಿಗೆ ಕೊಯ್ದು ಧಾರುಣವಾಗಿ ಹತ್ಯೆಗೈದಿದ್ದನು.
ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಚ್.ಆರ್.ಸಿದ್ದಪ್ಪ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧಿಶರಾದ ಸಯ್ಯುದುನಿಶಾ ಅವರು ವಿಚಾರಣೆ ನಡೆಸಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ಮತ್ತು 52 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಪ್ರಾಸಿಕ್ಯೂಷನ್ ಪರವಾಗಿ ಎನ್.ಬಿ.ವಿಜಯಲಕ್ಷಿ ಅವರು ವಾದ ಮಂಡಿಸಿದ್ದರು.
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತ, ಕಾಂಗ್ರೆಸ್ ಮುಖಂಡ ಇನಾಯತ್ ಅಲಿಗೆ ದೆಹಲಿ…
ಹೊಸದಿಲ್ಲಿ : ಇಂಡಿಗೋ ವಿಮಾನಗಳ ರದ್ದತಿ ಮತ್ತು ವಿಳಂಬದ ಕುರಿತು ತುರ್ತು ವಿಚಾರಣೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ಆಲಿಸಲು…
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…