ಮಂಡ್ಯ

ಮಂಡ್ಯ: ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ

ಮಂಡ್ಯ: 2024ರ ಮುಂಗಾರು ಹಂಗಾಮಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಅನುಷ್ಟಾನಗೊಳಿಸಲಾಗಿದ್ದು, ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಮತ್ತು ಇತರೆ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ ನೀರಾವರಿ ಬೆಳೆಗೆ ಮಂಡ್ಯ, ಮದ್ದೂರು, ಮಳವಳ್ಳಿ, ಕೆ.ಆರ್.ಪೇಟೆ, ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲ್ಲೂಕುಗಳ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ, ರಾಗಿ (ಮಳೆ ಆಶ್ರಿತ) ಬೆಳೆಗೆ ನಾಗಮಂಗಲ ಮತ್ತು ಪಾಂಡವಪುರ ತಾಲ್ಲೂಕುಗಳ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ, ಮುಸುಕಿನಜೋಳ (ಮಳೆ ಆಶ್ರಿತ) ಬೆಳೆಗೆ ಮಳವಳ್ಳಿ ತಾಲ್ಲೂಕಿನ ಅಧಿಸೂಚಿತ ಗ್ರಾಮ ಪಂಚಾಯಿತಿಗಳಲ್ಲಿ ರೈತರು ವಿಮೆಗೆ ನೊಂದಾಯಿಸಬಹುದಾಗಿರುತ್ತದೆ.

ಹೋಬಳಿಮಟ್ಟ : ಭತ್ತ (ನೀರಾವರಿ), ರಾಗಿ (ನೀರಾವರಿ), ರಾಗಿ (ಮಳೆ ಆಶ್ರಿತ), ಮುಸುಕಿನಜೋಳ (ನೀರಾವರಿ), ತೊಗರಿ (ಮಳೆ ಆಶ್ರಿತ), ಹುರುಳಿ (ಮಳೆ ಆಶ್ರಿತ), ನೆಲಗಡಲೆ (ಮಳೆ ಆಶ್ರಿತ), ಅಲಸಂದೆ (ಮಳೆ ಆಶ್ರಿತ), ಎಳ್ಳು (ಮಳೆ ಆಶ್ರಿತ), ಟೊಮ್ಯಾಟೋ ಮತ್ತು ಎಲೆಕೋಸು ಬೆಳೆಗಳಿಗೆ ಅಧಿಸೂಚಿತ ಹೋಬಳಿಗಳಲ್ಲಿ ರೈತರು ವಿಮೆಗೆ ನೊಂದಾಯಿಸಬಹುದಾಗಿರುತ್ತದೆ.

ಪರಿಷ್ಕೃತ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮಾರ್ಗಸೂಚಿಯನ್ವಯ ಬ್ಯಾಂಕಿನಲ್ಲಿ ಬೆಳೆ ಸಾಲ ಮಂಜೂರಾದ ಎಲ್ಲಾ ರೈತರನ್ನು ಕಡ್ಡಾಯವಾಗಿ ಈ ಯೋಜನೆಯಡಿ ಒಳಪಡಿಸಲಾಗುವುದು, ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ ಭಾಗವಹಿಸಲು ಇಚ್ಛೊಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು ಬೆಳೆ ವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಬೆಳೆ ಸಾಲ ಪಡೆಯದ ರೈತರಿಗೆ ಈ ಯೋಜನೆ ಐಚ್ಛಿಕವಾಗಿದ್ದು, ಅಧಿಸೂಚಿಸಲಾದ ಬೆಳೆಗಳಿಗೆ ರೈತರು ಅರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ ದಾಖಲೆಗಳಾದ ಪಹಣಿ / ಕಂದಾಯ ರಶೀದಿ/ ಖಾತೆ ಪುಸ್ತಕ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಆಧಾರ್ ಸಂಖ್ಯೆ ವಿವರಗಳೊಂದಿಗೆ ಬ್ಯಾಂಕ್ ಅಥವಾ ಸಾಮಾನ್ಯ ಸೇವಾ ಕೇಂದ್ರ ಹಾಗೂ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಬಹುದಾಗಿದೆ.

ಪರಿಷ್ಕೃತ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯ ಮಾರ್ಗಸೂಚಿಯನ್ವಯ ಬೆಳೆ ವಿಮೆ ನೊಂದಾಯಿಸಲು FID (Farmer Registration and Unified beneficiary information System) ಸಂಖ್ಯೆಯನ್ನು ಹೊಂದಿರುವುದು ಕಡ್ಡಾಯವಾಗಿರುತ್ತದೆ, ಒಂದು ವೇಳೆ ಈIಆ ಸಂಖ್ಯೆಯನ್ನು ಹೊಂದಿರದಿದ್ದಲ್ಲಿ ಹತ್ತಿರದ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರಗಳು ಅಥವಾ ತೋಟಗಾರಿಕೆ ಇಲಾಖೆಯಲ್ಲಿ ಆಧಾರ್ ಸಂಖ್ಯೆ ಹಾಗೂ ಆರ್.ಟಿ.ಸಿ. ವಿವರಗಳನ್ನು ಸಲ್ಲಿಸಿ ಈIಆ ಸಂಖ್ಯೆಯನ್ನು ಪಡೆಯಬಹುದಾಗಿರುತ್ತದೆ.

ಭತ್ತ (ನೀರಾವರಿ) ಪ್ರತಿ ಎಕರೆಗೆ ರೂ 755/- ಪ್ರತಿ ಹೆಕ್ಟೇರ್ ಗೆ ರೂ 1865/-, ಮುಸುಕಿನಜೋಳ (ನೀರಾವರಿ) ಪ್ರತಿ ಎಕರೆಗೆ ರೂ 522/- ಪ್ರತಿ ಹೆಕ್ಟೇರ್ ಗೆ ರೂ 1290/-, ಮುಸುಕಿನಜೋಳ (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 457/-, ಪ್ರತಿ ಹೆಕ್ಟೇರ್ ಗೆ ರೂ 1130/-, ರಾಗಿ (ನೀರಾವರಿ) ಪ್ರತಿ ಎಕರೆಗೆ ರೂ 411 ಪ್ರತಿ ಹೆಕ್ಟೇರ್ ಗೆ ರೂ 1015/-, ರಾಗಿ (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 344,ಪ್ರತಿ ಹೆಕ್ಟೇರ್ ಗೆ ರೂ 850/-, ಹುರುಳಿ (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 166/-,ಪ್ರತಿ ಹೆಕ್ಟೇರ್ ಗೆ ರೂ 410 ಪಾವತಿಸಬೇಕಿದ್ದು, ವಿಮೆ ಪಾವತಿಸಲು ಆಗಸ್ಟ್ 16 ಕೊನೆಯ ದಿನಾಂಕವಾಗಿರುತ್ತದೆ.

ನೆಲಗಡಲೆ (ಶೇಂಗಾ) (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 441/-, ಪ್ರತಿ ಹೆಕ್ಟೇರ್ ಗೆ ರೂ 1090, ಅಲಸಂದೆ (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 243/-, ಪ್ರತಿ ಹೆಕ್ಟೇರ್ ಗೆ ರೂ 600/-, ಟೊಮ್ಯಾಟೋ ಪ್ರತಿ ಎಕರೆಗೆ ರೂ 1861.10/-,ಪ್ರತಿ ಹೆಕ್ಟೇರ್ ಗೆ ರೂ 4598.75/- ಎಲೆಕೋಸು ಪ್ರತಿ ಎಕರೆಗೆ ರೂ 1222.19/- ಪ್ರತಿ ಹೆಕ್ಟೇರ್ ಗೆ ರೂ 3020ಪಾವತಿಸಬೇಕಿದ್ದು, ವಿಮೆ ಪಾವತಿಸಲು ಜುಲೈ 15 ಕೊನೆಯ ದಿನಾಂಕವಾಗಿರುತ್ತದೆ.

ತೊಗರಿ (ಮಳೆ ಆಶ್ರಿತ) ಪ್ರತಿ ಎಕರೆಗೆ ರೂ 388/- ಪ್ರತಿ ಹೆಕ್ಟೇರ್ ಗೆ ರೂ 960/- ಪಾವತಿಸಬೇಕಿದ್ದು, ವಿಮೆ ಪಾವತಿಸಲು ಜುಲೈ 31 ಕೊನೆಯ ದಿನಾಂಕವಾಗಿರುತ್ತದೆ.

ಎಳ್ಳು (ಮಳೆ ಆಶ್ರಿತ) ) ಪ್ರತಿ ಎಕರೆಗೆ ರೂ 233 ಪ್ರತಿ ಹೆಕ್ಟೇರ್ ಗೆ ರೂ 575/- ನಿಗದಿಯಾಗಿದ್ದು, ವಿಮೆ ಪಾವತಿಸಲು ಜುಲೈ 1 ಕೊನೆಯ ದಿನಂಕವಾಗಿರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

7 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

7 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

7 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

7 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

7 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

7 hours ago