ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಭವನ ಮಾರಾಟಕ್ಕಿದೆ ಎಂದು ಹೇಳಿಲ್ಲ, ಸರ್ಕಾರ ಇಲಾಖೆಗೆ ವಹಿಸಿಕೊಟ್ಟು, ನಗರದ ಹೃದಯ ಭಾಗದಲ್ಲಿ ಹೊಸ ಭವನ ನಿರ್ಮಾಣ ಕ್ರಮ ವಹಿಸಲಾಗುವುದು ಎಂದು ಹೇಳಿದ್ದೆನೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಸ್ಪಷ್ಟ ಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ೨೦೦೮ರಲ್ಲಿ ಅಧ್ಯಕ್ಷನಾಗಿದ್ದಾಗ ಅಂದಿನ ಮಂಡ್ಯ ಜಿಲ್ಲಾಧಿಕಾರಿ ಡಾ.ಜಾಫರ್ ಅವರಿಗೆ ಹೊಸ ಭವನ ನಿರ್ಮಾಣಕ್ಕೆ ಮನವಿ ನೀಡಲಾಗಿದ್ದು, ಸ್ಥಳ ಹುಡುಕಿ ಎಂದು ಹೇಳಿದ್ದರು. ಅಂದಿನ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಅವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದರು. ಆಗಿನ ಅವಧಿಯಲ್ಲಿ ಮಾರಾಟಕ್ಕೆ ಆಲೋಚನೆ ಮಾಡಿದ್ದು, ಕಾಲಕೂಡಿ ಬರಲಿಲ್ಲ ಎಂದರು.
ಪತ್ರಿಕೆಗಳಲ್ಲಿ ಮಾರಾಟ ಮಾಡುವುದಾಗಿ ತಿಳಿಸಲಾಗಿದ್ದು, ಈ ವಿಷಯದ ಸಲುವಾಗಿ ಜಿಲ್ಲಾಧಿಕಾರಿಗಳಿಗಾಗಲೀ, ಜಿಲ್ಲಾ ಉಸ್ತುವಾರಿ ಸಚಿವರ ಗಮನದಲ್ಲಾಗಲಿ ಇಲ್ಲ ಎನ್ನುತ್ತಿದ್ದಂತೆ ಪತ್ರಕರ್ತರು ಮುದ್ದೇಗೌಡರು ಹೇಳಿದ್ದನ್ನು ಮನವರಿಕೆ ಮಾಡಿದ ನಂತರ ಮಾತಿನ ಭರದಲ್ಲಿ ಹೇಳಿದ್ದೇನೆ ಎಂದು ಒಪ್ಪಿಕೊಂಡರು.
ಕನ್ನಡ ಭವನ ಮಾರಾಟ ಮಾಡುವುದಿಲ್ಲ, ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುವುದು. ನಗರದ ಮಧ್ಯೆ ತಂದು ಉನ್ನತ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಗೋಷ್ಠಿಯಲ್ಲಿ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಸಾಹಿತಿ ಕೃಷ್ಣ ಸ್ವರ್ಣಸಂದ್ರ ಇದ್ದರು.
ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್ ಗೌಡ ಹೇಳಿದ್ದಾರೆ. ಈ ಕುರಿತು…
ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…
ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…
ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…
ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…
ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…