ಮಂಡ್ಯ

ಮಂಡ್ಯ | ಕಸಾಪ ಭವನ ಮಾರಾಟಕ್ಕಿಲ್ಲ; ಮುದ್ದೇಗೌಡ ಸ್ಪಷ್ಟನೆ

ಮಂಡ್ಯ: ಕನ್ನಡ ಸಾಹಿತ್ಯ ಪರಿಷತ್ ಭವನ ಮಾರಾಟಕ್ಕಿದೆ ಎಂದು ಹೇಳಿಲ್ಲ, ಸರ್ಕಾರ ಇಲಾಖೆಗೆ ವಹಿಸಿಕೊಟ್ಟು, ನಗರದ ಹೃದಯ ಭಾಗದಲ್ಲಿ ಹೊಸ ಭವನ ನಿರ್ಮಾಣ ಕ್ರಮ ವಹಿಸಲಾಗುವುದು ಎಂದು ಹೇಳಿದ್ದೆನೆಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷ ಪ್ರೊ.ಎಚ್.ಎಸ್.ಮುದ್ದೇಗೌಡ ಸ್ಪಷ್ಟ ಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ೨೦೦೮ರಲ್ಲಿ ಅಧ್ಯಕ್ಷನಾಗಿದ್ದಾಗ ಅಂದಿನ ಮಂಡ್ಯ ಜಿಲ್ಲಾಧಿಕಾರಿ ಡಾ.ಜಾಫರ್ ಅವರಿಗೆ ಹೊಸ ಭವನ ನಿರ್ಮಾಣಕ್ಕೆ ಮನವಿ ನೀಡಲಾಗಿದ್ದು, ಸ್ಥಳ ಹುಡುಕಿ ಎಂದು ಹೇಳಿದ್ದರು. ಅಂದಿನ ರಾಜ್ಯಾಧ್ಯಕ್ಷ ನಲ್ಲೂರು ಪ್ರಸಾದ್ ಅವರು ಸಕಾರಾತ್ಮಕವಾಗಿ ಸ್ಪಂಧಿಸಿದ್ದರು. ಆಗಿನ ಅವಧಿಯಲ್ಲಿ ಮಾರಾಟಕ್ಕೆ ಆಲೋಚನೆ ಮಾಡಿದ್ದು, ಕಾಲಕೂಡಿ ಬರಲಿಲ್ಲ ಎಂದರು.

ಪತ್ರಿಕೆಗಳಲ್ಲಿ ಮಾರಾಟ ಮಾಡುವುದಾಗಿ ತಿಳಿಸಲಾಗಿದ್ದು, ಈ ವಿಷಯದ ಸಲುವಾಗಿ ಜಿಲ್ಲಾಧಿಕಾರಿಗಳಿಗಾಗಲೀ, ಜಿಲ್ಲಾ ಉಸ್ತುವಾರಿ ಸಚಿವರ ಗಮನದಲ್ಲಾಗಲಿ ಇಲ್ಲ ಎನ್ನುತ್ತಿದ್ದಂತೆ ಪತ್ರಕರ್ತರು ಮುದ್ದೇಗೌಡರು ಹೇಳಿದ್ದನ್ನು ಮನವರಿಕೆ ಮಾಡಿದ ನಂತರ ಮಾತಿನ ಭರದಲ್ಲಿ ಹೇಳಿದ್ದೇನೆ ಎಂದು ಒಪ್ಪಿಕೊಂಡರು.

ಕನ್ನಡ ಭವನ ಮಾರಾಟ ಮಾಡುವುದಿಲ್ಲ, ಜಿಲ್ಲಾಧಿಕಾರಿಗಳು ಮತ್ತು ಸರ್ಕಾರ ತೆಗೆದುಕೊಳ್ಳುವ ತೀರ್ಮಾನದ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುವುದು. ನಗರದ ಮಧ್ಯೆ ತಂದು ಉನ್ನತ ಮಟ್ಟದ ಕನ್ನಡ ಸಾಹಿತ್ಯ ಪರಿಷತ್ ಭವನವನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

ಗೋಷ್ಠಿಯಲ್ಲಿ ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ಸಾಹಿತಿ ಕೃಷ್ಣ ಸ್ವರ್ಣಸಂದ್ರ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದುಷ್ಕೃತ್ಯ ನಿಯಂತ್ರಿಸಲು ಕಾನೂನು ರೂಪಿಸಬೇಕು

ಚಾಮರಾಜನಗರ ತಾಲ್ಲೂಕಿನ ಮಸಾಣಪುರ ಗ್ರಾಮದಲ್ಲಿ ಬಾಬಾ ಸಾಹೇಬ ಡಾ.ಅಂಬೇಡ್ಕರ್‌ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಘಟನೆ ನಿಜಕ್ಕೂ ತಲೆತಗ್ಗಿಸುವಂಥ ಹೇಯ ಕೃತ್ಯವಾಗಿದೆ.ಈ…

1 hour ago

ಓದುಗರ ಪತ್ರ: ಯಶಸ್ಸಿಗೆ ಮೂಲ ಅಡಿಪಾಯವೇ ಸಮಯ ಪಾಲನೆ!

‘ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೇ’ ಎಂಬ ಗಾದೆಯ ಮಾತು ನಿಜಕ್ಕೂ ಇಂದಿನ ಕಾಲಘಟ್ಟಕ್ಕೆ ಹೆಚ್ಚಾಗಿ ಅನ್ವಯಿಸುತ್ತದೆ. ಏಕೆಂದರೆ ಸಮಯ ಪಾಲನೆ…

1 hour ago

ಓದುಗರ ಪತ್ರ: ಲಂಚದ ಬಗ್ಗೆ ಮಾತೇಕೆ?

ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ಮಾಡಲು ಸರ್ಕಾರಿ ನೌಕರರಿಗೆ ಅಥವಾ ಅಧಿಕಾರಿಗಳಿಗೆ ೧೦ ರೂ. ಲಂಚವನ್ನು ಕೂಡ ನೀಡಬೇಡಿ ಎಂದು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಮೂಳೆಗಳು ಮುರಿಯುತ್ತಿದ್ದರೂ ಬದುಕು ಕಟ್ಟಿಕೊಂಡ ರಾಧಿಕಾ

ಪಂಜುಗಂಗೊಳ್ಳಿ  ಅವಳ ಗೊಂಬೆಗಳು ದೇಶ ದೇಶಗಳಿಗೆ ಹಾರುತ್ತವೆ! ಕೊಯಂಬತ್ತೂರಿನ ಜೆ.ಎ.ರಾಧಿಕಾ ಐದು ವರ್ಷದವಳಾಗಿದ್ದಾಗ ಕಾಲ ಮೂಳೆ ಮುರಿದು, ಶಸ್ತ್ರಚಿಕಿತ್ಸೆ ನಡೆದು…

1 hour ago

ಪಣ್ಣೇದೊಡ್ಡಿ ಡೇರಿ ಆಡಳಿತ-ಹಾಲು ಉತ್ಪಾದಕರ ಮಾರಾಮಾರಿ

ಎಂ.ಆರ್.ಚಕ್ರಪಾಣಿ ಜಗಳದಿಂದಾಗಿ ಡೇರಿಗೆ ಬೀಗ: ದೂರು-ಪ್ರತಿ ದೂರು ದಾಖಲು; ಖಾಸಗಿ ಡೇರಿಗೆ ಹಾಲು ಸರಬರಾಜು ಮದ್ದೂರು: ತಾಲ್ಲೂಕಿನ ಪಣ್ಣೇದೊಡ್ಡಿ ಗ್ರಾಮದ…

2 hours ago