ಮಂಡ್ಯ

ಮಂಡ್ಯ ಕೃಷಿ ಪ್ರದಾನ ಜಿಲ್ಲೆ: ಸಿಎಂ ಸಿದ್ದರಾಮಯ್ಯ

ಮಂಡ್ಯ: ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ ಮಾತಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದರು. ಇದು ಐದು ಜಿಲ್ಲೆಗಳನ್ನು ಪ್ರತಿನಿಧಿಸುವ ವಿಶ್ವವಿದ್ಯಾನಿಲಯವಾಗಿದ್ದು, ರೈತರು ಏನೆಲ್ಲಾ ಬೆಳೆಯುತ್ತಾರೆ ಎಂಬುದನ್ನು ಇದರಲ್ಲಿ ಸವಿವರವಾಗಿ ತೋರಿಸಲಾಗುತ್ತದೆ. ಲ್ಯಾಬ್‌ ಟು ಲ್ಯಾಂಡ್‌ ಆದರೆ ಮಾತ್ರ ರೈತರಿಗೆ ಅನುಕೂಲವಾಗಿದೆ. ಇದು ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಕೃಷಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ತಿಳಿದುಕೊಳ್ಳಬೇಕು. ಮಂಡ್ಯ ಕೂಡ ಕೃಷಿ ಪ್ರದಾನವಾದ ಜಿಲ್ಲೆ. ಇಲ್ಲಿ ಅನೇಕ ಬೆಳೆಗಳನ್ನು ಬೆಳೆಯುತ್ತಾರೆ ಎಂದು ಹೇಳಿದರು.

ಇದನ್ನು ಓದಿ: ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?

ನಾನು ಕೃಷಿ ಮೇಲೆ ಅವಲಂಬಿತನಾಗಿದ್ದೆ. ನಾನು ರಜೆಯಲ್ಲಿದ್ದಾಗ ಊರಿಗೆ ಹೋಗಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದೆ. ಈಗ ಕೃಷಿ ಲಾಭದಾಯಕಾನ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡುತ್ತಿದೆ. ಕೃಷಿ ಬಗ್ಗೆ ರೈತರಿಗೆ ಸಂಪೂರ್ಣವಾಗಿ ಅರ್ಥವಾಗಬೇಕು. ಬೆಳೆದ ಪದಾರ್ಥಗಳಲ್ಲಿ ಮೌಲ್ಯವರ್ಧನೆ ಮಾಡಬೇಕು. ಆಗ ಮಾತ್ರ ಹೆಚ್ಚು ಲಾಭದಾಯಕ ಆಗಲಿದೆ. ಹೊಸ ತಳಿಗಳನ್ನ ಉಪಯೋಗಿಸಬೇಕು. ಕೂಲಿ ಕಾರ್ಮಿಕರು ಸಿಗುವುದು ಕಷ್ಟವಾಗುತ್ತಿರುವುದರಿಂದ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ ಎಂದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

29 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

31 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

32 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago