ಮಂಡ್ಯ: ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಸಂಪೂರ್ಣ ಅನುಕೂಲವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮಂಡ್ಯದಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ನಾನು ಮಂಡ್ಯದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಆಗಲೇಬೇಕೆಂದು ಹೇಳಿದ್ದೆ. ನನ್ನ ಮಾತಿಗೆ ಎಲ್ಲರೂ ಒಪ್ಪಿಗೆ ಸೂಚಿಸಿದರು. ಇದು ಐದು ಜಿಲ್ಲೆಗಳನ್ನು ಪ್ರತಿನಿಧಿಸುವ ವಿಶ್ವವಿದ್ಯಾನಿಲಯವಾಗಿದ್ದು, ರೈತರು ಏನೆಲ್ಲಾ ಬೆಳೆಯುತ್ತಾರೆ ಎಂಬುದನ್ನು ಇದರಲ್ಲಿ ಸವಿವರವಾಗಿ ತೋರಿಸಲಾಗುತ್ತದೆ. ಲ್ಯಾಬ್ ಟು ಲ್ಯಾಂಡ್ ಆದರೆ ಮಾತ್ರ ರೈತರಿಗೆ ಅನುಕೂಲವಾಗಿದೆ. ಇದು ಕೃಷಿ ಪ್ರಧಾನವಾದ ದೇಶವಾಗಿರುವುದರಿಂದ ಕೃಷಿಗೆ ಸಂಬಂಧಿಸಿದಂತೆ ಎಲ್ಲಾ ಮಾಹಿತಿ ತಿಳಿದುಕೊಳ್ಳಬೇಕು. ಮಂಡ್ಯ ಕೂಡ ಕೃಷಿ ಪ್ರದಾನವಾದ ಜಿಲ್ಲೆ. ಇಲ್ಲಿ ಅನೇಕ ಬೆಳೆಗಳನ್ನು ಬೆಳೆಯುತ್ತಾರೆ ಎಂದು ಹೇಳಿದರು.
ಇದನ್ನು ಓದಿ: ಹೊಸ ದಾಖಲೆ ನಿರ್ಮಿಸಿದ ಬೆಂಗಳೂರು ಪೊಲೀಸರು: ಏನದು ಗೊತ್ತಾ?
ನಾನು ಕೃಷಿ ಮೇಲೆ ಅವಲಂಬಿತನಾಗಿದ್ದೆ. ನಾನು ರಜೆಯಲ್ಲಿದ್ದಾಗ ಊರಿಗೆ ಹೋಗಿ ಕೃಷಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಿದೆ. ಈಗ ಕೃಷಿ ಲಾಭದಾಯಕಾನ ಅಥವಾ ಇಲ್ಲವಾ ಎಂಬ ಪ್ರಶ್ನೆ ಮೂಡುತ್ತಿದೆ. ಕೃಷಿ ಬಗ್ಗೆ ರೈತರಿಗೆ ಸಂಪೂರ್ಣವಾಗಿ ಅರ್ಥವಾಗಬೇಕು. ಬೆಳೆದ ಪದಾರ್ಥಗಳಲ್ಲಿ ಮೌಲ್ಯವರ್ಧನೆ ಮಾಡಬೇಕು. ಆಗ ಮಾತ್ರ ಹೆಚ್ಚು ಲಾಭದಾಯಕ ಆಗಲಿದೆ. ಹೊಸ ತಳಿಗಳನ್ನ ಉಪಯೋಗಿಸಬೇಕು. ಕೂಲಿ ಕಾರ್ಮಿಕರು ಸಿಗುವುದು ಕಷ್ಟವಾಗುತ್ತಿರುವುದರಿಂದ ಯಂತ್ರಗಳನ್ನು ಬಳಸಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ ಎಂದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…