ಮಂಡ್ಯ : ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯ ಬಹುತೇಕ ಭರ್ತಿಯತ್ತ ತಲುಪಿದೆ. ಡ್ಯಾಂ ಭರ್ತಿಯಾಗಲು ಇನ್ನು ೪ ಅಡಿ ಬಾಕಿಯಿದ್ದು, ಇಂದು ಸಂಜೆಯ ವೇಳೆಗೆ ಡ್ಯಾಂ ಸಂಪೂರ್ಣವಾಗಿ ಭರ್ತಿಯಾಗುವ ಸಾಧ್ಯತೆ ಇದೆ.
ಹಾರಂಗಿ ಹಾಗೂ ಹೇಮಾವತಿಯಿಂದ ಹೆಚ್ಚು ನೀರು ಹರಿಸುತ್ತಿರುವುದರಿಂದ ಇಂದು ಸಂಜೆಯೊಳಗೆ ಕನ್ನಂಬಾಡಿ ಕಟ್ಟೆ ಭರ್ತುಯಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಅಲ್ಲದೆ ಒಳಹರಿವು ಹೆಚ್ಚಳವಾಗುತ್ತಿರುವುದರಿಂದ ಹೊರ ಹರಿವಿನ ಪ್ರಮಾಣ ಹಂತ ಹಂತವಾಗಿ ಹೆಚ್ಚಿಸಲಾಗುತ್ತಿದೆ. ಇದರಿಂದಾಗಿ ನದಿಪಾತ್ರದ ೯೨ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ. ಅಲ್ಲದೆ ರಂಗನತಿಟ್ಟು ಪಕ್ಷಿಧಾಮದ ದೋಣಿವಿಹಾರಕ್ಕೆ ನಿಷೇಧಿಸಲಾಗಿದೆ. ನದಿಗೆ ಡ್ಯಾಂನಿಂದ ಯಾವುದೇ ಕ್ಷಣದಲ್ಲಾದ್ರೂ ಹೊರಹರಿವಿನ ಪ್ರಮಾಣ ಹೆಚ್ಚಾಗಬಹುದು. ಹೀಗಾಗಿ ಜಿಲ್ಲಾಡಳಿತ ಕೂಡ ನದಿ ಮಾತ್ರದ ಜನರಿಗೆ ಅಲರ್ಟ್ ಘೋಷಣೆ ಮಾಡಿದೆ. ಇನ್ನು ಕೆ.ಆರ್ ಎಸ್ ಜಲಾಶಯ ಭರ್ತಿಯತ್ತ ಸಾಗುತ್ತಿರುವುದರಿಂದ ಅನ್ನದಾತರಲ್ಲಿ ಸಂತಸ ಮನೆ ಮಾಡಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…