ಮಂಡ್ಯ

ಮಂಡ್ಯ | ಡಿ.15ರಂದು ಕೆ.ಎಸ್ ನರಸಿಂಹಸ್ವಾಮಿ ಗೀತಾ ನೃತ್ಯೋತ್ಸವ

ಮಂಡ್ಯ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೆ.ಎಸ್.ನರಸಿಂಹಸ್ವಾಮಿ ಟ್ರಸ್ಟ್ ವತಿಯಿಂದ ಕೆ.ಎಸ್.ನರಸಿಂಹಸ್ವಾಮಿರವರ ನೆನಪಿನ ಗೀತ ನೃತ್ಯೋತ್ಸವ ಕಾರ್ಯಕ್ರಮವನ್ನು ಡಿಸೆಂಬರ್ ೧೫ರ ಸಂಜೆ ೦೫.೩೦ಕ್ಕೆ ನಗರದ ಬಾಲಭವನದ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಡೆಯಲಿರುವ ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಪೂರ್ವಭಾವಿಯಾಗಿ ಹಾಗೂ ಸಮ್ಮೇಳನಕ್ಕೆ ಸ್ವಾಗತ ಕೋರುವ ಸಲುವಾಗಿ ಸದರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮವನ್ನು ಹಿರಿಯ ಸಾಹಿತಿ ತೈಲೂರು ವೆಂಕಟಕೃಷ್ಣ ಉದ್ಘಾಟಿಸಲಿದ್ದು, ಅಧ್ಯಕ್ಷತೆಯ್ನು ಟ್ರಸ್ಟ್‌ನ ಅಧ್ಯಕ್ಷ ಡಾ.ಕಿಕ್ಕೇರಿ ಕೃಷ್ಣಮೂರ್ತಿ ವಹಿಸುವರು. ಟ್ರಸ್ಟ್‌ನ ಸದಸ್ಯ ಕಾರ್ಯದರ್ಶಿಯಾಗಿ ಡಾ.ಬಿ.ವಿ.ನಂದೀಶ್ ಪ್ರಾಸ್ತವಿಕ ನುಡಿಗಳನ್ನಾಡುವರು ಎಂದರು.

ಕಾರ್ಯಕ್ರಮದಲ್ಲಿ ಖ್ಯಾತ ಗಾಯಕ ಶ್ರೀನಿವಾಸ ಉಡುವ, ಪೂರ್ಣೀಮ, ಡಾ.ಕಿಕ್ಕೇರಿ ಕೃಷ್ಣಮೂರ್ತಿ, ಡೇವಿಡ್ ಪ್ರತಿಭಾಂಜಲಿ, ವಿದ್ಯಾಶಂಕರ್, ಎಂ.ಎನ್.ಶ್ರೀಧರ್, ಇಂದಿರಾಮಯ್ಯ, ಟಿ.ಎನ್.ಶ್ರೀಧರ್, ಪಿ.ಎಂ>ಶಿವಶಂಕರ್ ಮುಂತಾದ ಕಲಾವಿದರು ಕೆ.ಎಸ್.ನರಸಿಂಹಸ್ವಾಮಿ ಅವರ ಗೀತಗಾಯನ ಹಾಗೂ ನೃತ್ಯ ಕಾರ್ಯಕ್ರಮ ನಡೆಸಲಿದ್ದಾರೆ ಎಂದು ಹೇಳಿದರು.

ಸದರಿ ಕಾರ್ಯಕ್ರಮವು ೮೭ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಸ್ವಾಗತ ಕೋರುವ ನಿಟ್ಟಿನಲ್ಲಿ ರೂಪಿಸಲಾಗಿದ್ದು, ಸಮ್ಮೇಳನದ ಪ್ರಾರಂಭಕ್ಕೆ ೮೭ ಕಲಾವಿದರು ನಾಡಗೀತೆಯನ್ನು ಹಾಡಲಿದ್ದು, ಅದರ ಪೂರ್ವಭಾವಿ ಸಿದ್ದತಾ ಗಾಯನವನ್ನು ಕಾರ್ಯಕ್ರಮದಲ್ಲಿ ಮಾಡಲಾಗುವುದು. ಸಂಪೂರ್ಣ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.

ಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ನಗರಸಭಾ ಸದಸ್ಯ, ಗಾಯಕ ಶ್ರೀಧರ್, ಡೇವಿಡ್ ಪ್ರತಿಭಾಂಜಲಿ ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹವಾಮಾನ ಏರುಪೇರಿನಿಂದಾಗಿ ಕಾಳುಮೆಣಸಿಗೂ ಕಂಟಕ

ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್‌ ಡಿಸೋಜ ಮಡಿಕೇರಿ: ಈ ಬಾರಿಯ…

35 mins ago

ಅವಳಿ ತಾಲ್ಲೂಕುಗಳಲ್ಲಿ ಭತ್ತದ ಕಟಾವು ಜೋರು

ಭೇರ್ಯ ಮಹೇಶ್‌ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…

48 mins ago

ಗಬ್ಬೆದ್ದು ನಾರುತ್ತಿರುವ ಚರಂಡಿಗಳು, ಸಾಂಕ್ರಾಮಿಕ ರೋಗದ ಭೀತಿ

ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…

54 mins ago

ಸರಗೂರಿನಲ್ಲಿ ಬೀದಿ ನಾಯಿಗಳ ಹಾವಳಿ : ತತ್ತರಿಸಿದ ಜನತೆ

ಸರಗೂರು : ಪಟ್ಟಣ ಪಂಚಾಯಿತಿ ವ್ಯಾಪ್ತಿ ಯಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಜನ ಸಾಮಾನ್ಯರು ತತ್ತರಿಸಿ ಆತಂಕದಲ್ಲಿದ್ದರೂ ನಿಯಂ ತ್ರಣ…

1 hour ago

ಕುಕ್ಕರಹಳ್ಳಿ ಕೆರೆ ಸ್ವಚ್ಛತೆಗೆ ಗೋವಾದಿಂದ ದೋಣಿ ಖರೀದಿ

ನುರಿತ ತಜ್ಞರ ತಂಡದಿಂದ ಕೆರೆ ಸ್ವಚ್ಛತೆ ಆರಂಭಿಸಲು ತಯಾರಿ ಮೈಸೂರು : ಪ್ರವಾಸಿಗರು ಹಾಗೂ ವಾಯುವಿಹಾರಿಗಳ ನೆಚ್ಚಿನ ತಾಣವಾದ ಕುಕ್ಕರಹಳ್ಳಿ…

1 hour ago

ಓದುಗರ ಪತ್ರ | ಸೂಚನಾ ಫಲಕಗಳನ್ನು ಸರಿಪಡಿಸಿ

ಮೈಸೂರು ನಗರದ ಪ್ರತಿಯೊಂದೂ ವಾರ್ಡ್‌ನ ಪ್ರತಿ ಮಾರ್ಗದಲ್ಲೂ ಮೈಸೂರು ಮಹಾ ನಗರ ಪಾಲಿಕೆಯಿಂದ ವಾರ್ಡ್ ಸಂಖ್ಯೆ, ವಾರ್ಡ್‌ನ್ನು ಪ್ರತಿನಿಧಿಸುವ ಪಾಲಿಕೆ…

1 hour ago