ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು ಎಂದರು.
ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಅತಿ ಹೆಚ್ಚು ಕಾಲ ಸರ್ಕಾರದ ಮುಖ್ಯಸ್ಥರಾದ ದಾಖಲೆ ಬರೆದಿದ್ದಾರೆ. ಈ ಮೂಲಕ ಸಿಕ್ಕಿಂನ…
ತುಮಕೂರು: ಏಪ್ರಿಲ್.1ರಂದು ತುಮಕೂರಿನ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು…
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…