ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು ಎಂದರು.
ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…