ಮಂಡ್ಯ

ಮಂಡ್ಯ | ರೈತ ಉತ್ಪಾದಕಾ ಸಂಸ್ಥೆ ಹೆಚ್ಚಾಗಲಿ; ಡಿಸಿ ಡಾ.ಕುಮಾರ

ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.

ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು‌ ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.

ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು ಎಂದರು.

ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.

ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

30 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

1 hour ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

5 hours ago