ಮಂಡ್ಯ: ರೈತರು ತಾವು ಬೆಳೆದ ಬೆಳೆಗಳಿಗೆ ತಾವೇ ಬೆಲೆ ಕಟ್ಟಿ ಮಾರಾಟ ಮಾಡುವ ರೀತಿ ಬದಲಾವಣೆ ಮಾಡಿಕೊಳ್ಳಲು ರೈತ ಉತ್ಪಾದಕ ಸಂಘಗಳ ಸಂಖ್ಯೆ ಜಿಲ್ಲೆಯಲ್ಲಿ ಹೆಚ್ಚಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದರು.
ಅವರು ಇಂದು (ಫೆ.15) ರಂದು ಜಿಲ್ಲಾಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಡೆದ ಮಂಡ್ಯ ಜಿಲ್ಲೆ ರೈತ ಉತ್ಪಾದಕ ಸಂಸ್ಥೆಗಳ ಮುಖ್ಯಸ್ಥರು, ಕಾರ್ಯನಿರ್ವಹಣಾಧಿಕಾರಿಗಳಿಗೆ ಹಾಗೂ ಸಂಪನ್ಮೂಲ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ವ್ಯಾಪಾರ ಮತ್ತು ವ್ಯಾವಹಾರಿ ಅಭಿವೃದ್ಧಿಯ ಕುರಿತು ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಮಂಡ್ಯ ಜಿಲ್ಲೆ ಕೃಷಿ ಪ್ರಧಾನವಾದ ಜಿಲ್ಲೆ, ಕೃಷಿಯಲ್ಲಿ ತನ್ನದೇ ಆದ ವಿಶೇಷ ಮಹತ್ವವವನ್ನು ಹೊಂದಿದೆ. ರೈತರು ಆರ್ಥಿಕವಾಗಿ ಸದೃಢರಾಗಲು ರೈತರು ಬೆಳೆದ ಬೆಳೆಗಳ ಮೌಲ್ಯವರ್ಧನೆಯಾಗಬೇಕು ರೈತ ಉತ್ಪದಕಾ ಸಂಘಗಳು ಸಕ್ರಿಯವಾಗಿ ಕಾರ್ಯನಿರ್ವಹಿಸಿ ರೈತರಿಗೆ ಅಗತ್ಯ ಮಾಹಿತಿಗಳನ್ನು ಒದಗಿಸಬೇಕು ಎಂದರು.
ರೈತರು ಬೆಳೆದ ಬೆಳೆಗೆ ಸರಿಯಾದ ಬೆಲೆ ಸಿಗಬೇಕೆಂದರೆ, ದಲ್ಲಾಳಿ ಹಾಗೂ ಮಧ್ಯವರ್ತಿಗಳ ಹಾವಳಿಯಿಂದ ತಪ್ಪಿಸಬೇಕು., ರೈತರು ನಿಜವಾಗಿಯೂ ಸ್ವಾವಲಂಬಿಗಳಾಗಬೇಕೆಂದರೆ ರೈತ ಉತ್ಪಾದಕರ ಸಂಸ್ಥೆಗಳ ಅವಶ್ಯಕತೆ ಇದೆ, ಇದರಿಂದ ರೈತರು ಸಹ ಕಂಪನಿಗಳು ಮಾಲೀಕರಾಗಬಹುದು ಎಂದರು.
ಸರ್ಕಾರದ ಪಿ.ಎಂ.ಎಫ್. ಇ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು, ರೈತರು ಬೆಳೆದ ಬೆಳೆಗಳು ಗುಣಮಟ್ಟದಿಂದ ಕೂಡಿರಬೇಕು ಹಾಗೂ ಗ್ರಾಹಕರ ಗಮನ ಸೆಳೆಯುವ ರೀತಿ ಬ್ರ್ಯಾಡಿಂಗ್ ಆಗಬೇಕು. ಇದರಿಂದ ಜಿಲ್ಲೆ ಮಾತ್ರವಲ್ಲ ಹೊರ ರಾಜ್ಯ ಮತ್ತು ರಾಷ್ಟ್ರದಲ್ಲಿ ಮಾರುಕೊಟ್ಟೆ ದೊರೆಯುತ್ತದೆ ಎಂದರು.
ನಂತರ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್.ನಂದಿನಿ ಅವರು ಮಾತನಾಡಿ ಇದು ಜಿಲ್ಲೆಯಲ್ಲಿ ಕೃಷಿಯ ಕುರಿತು ನಡೆಸುತ್ತಿರುವ ನನ್ನ ಮೊದಲ ಕಾರ್ಯಕ್ರಮ, ದೇಶದ ಜಿ.ಡಿ.ಪಿ.ಗೆ ಸೇವಾ ವಲಯದ ಕೊಡುಗೆ ಅತಿ ಹೆಚ್ಚು, ಅದರಲ್ಲಿ ಅತಿ ಹೆಚ್ಚು ಜನ ಕೃಷಿಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ, ಶ್ರಮ ಪಟ್ಟು ದುಡಿಯುತ್ತಿರುವ ರೈತರಿಗಿಂತ ಹೆಚ್ಚು ಕೃಷಿಗೆ ಸಂಬಂಧಿಸಿದ ಕಂಪನಿಗಳು ಆದಾಯವನ್ನು ಗಳಿಸುತ್ತಿವೆ, ರೈತರ ಆದಾಯ ಹೆಚ್ಚಬೇಕು ಎಂದರೆ ಇಂತಹಾ ಕಾರ್ಯಾಗಾರಗಳು ಮುಖ್ಯ ಮುಕ್ತ ಮನಸ್ಸಿನಿಂದ ವಿಚಾರಗಳು ವಿನಿಮಯ ಮಾಡಿಕೊಂಡು ಅದನ್ನು ಕಾರ್ಯ ಪ್ರವೃತ್ತಿಯಲ್ಲಿ ಅಳವಡಿಸಿ ಆದಾಯ ಹೆಚ್ಚಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್ , ಕೃಷಿ ಇಲಾಖೆಯ ಸಹಾಯಕ ನಿರ್ದೇಶಕಿ ಸುನೀತಾ, ರೈತ ಉತ್ಪಾದಕ ಸಂಸ್ಥೆಗಳು ಮುಖ್ಯಸ್ಥರುಗಳಾದ ಕರಸವಾಡಿ ಮಹದೇವ್, ಹರೀಶ್, ಹನುಮಂತೇಗೌಡ, ಸುಬ್ರಹ್ಮಣ್ಯ, ಮಾಯಣ್ಣ, ಚಿಕ್ಕೇಗೌಡ, ಜಗದೀಶ್ ಬಾಬು ಮತ್ತು ಇನ್ನಿತರ ಉಪಸ್ಥಿತರಿದ್ದರು.
ಬೆಂಗಳೂರು: ಅಗತ್ಯ ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಬಂಡೀಪುರ ಹಾಗೂ ನಾಗರಹೊಳೆ ಉದ್ಯಾನಗಳಲ್ಲಿ ಸಫಾರಿ ಆರಂಭಿಸಿ ಎಂದು ಸಿಎಂ ಡಿ.ಕೆ.ಶಿವಕುಮಾರ್…
ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…
ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್ ಮೇಲೆ ಪೊಲೀಸರು…
ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್…
ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…
ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್ ತಿಂಗಳಿನಲ್ಲಿ ಮೂರನೇ…