ಮಂಡ್ಯ

ಮಂಡ್ಯ | ನಿರ್ಮಿತಿ ಕೇಂದ್ರದಲ್ಲಿ ಭಾರಿ ಭ್ರಷ್ಟಾಚಾರ ; ತನಿಖೆಗೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ ನಡೆಸಿರುವ ಕೇಂದ್ರದ ನಿವೃತ್ತ ಯೋಜನಾ ವ್ಯವಸ್ಥಾಪಕ ನರೇಶ್ ನಾಲ್ಕಾರು ಕೋಟಿ ರೂ ಲಪಟಾಯಿಸಿದ್ದಾರೆ ಎಂದು ದೂರಿದರು.

ಮದ್ದೂರು ತಾಲೂಕಿನ ಹರಕನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡದ ಕಾಮಗಾರಿ ಆರಂಭಿಸದೇ ಕಟ್ಟಡ ಕಾಮಗಾರಿಗೆ ಮೀಸಲಿಟ್ಟಿದ್ದ ೨೫ ಲಕ್ಷ ರೂಗಳಲ್ಲಿ ಮುಂಗಡ ಹಣ ೧೮.೭೫ ಬಿಡುಗಡೆಯಾಗಿದ್ದು, ಕೇಂದ್ರದ ಸಿಬ್ಬಂದಿಯೇ ಆದ ಸುನಿಲ್ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಠಿಸಿ, ೧,೦೨,೬೧೦ ರೂ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮಂಡ್ಯ, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಮದ್ದೂರು, ಪಾಂಡವಪುರ ತಾಲೂಕಿನಲ್ಲಿ ಐಟಿಐ ಕಾಲೇಜುಗಳ ವರ್ಕ್‌ಶಾಪ್ ಮತ್ತು ಟೆಕ್ನಾಲಜಿ ಲ್ಯಾಬ್ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ ೮೩.೨೯ ಲಕ್ಷ ರೂ ಮತ್ತು ೨೦.೨೯ ಲಕ್ಷ ರೂ ಕ್ರಮವಾಗಿ ಸಿದ್ದಗೊಳಿಸಿ, ಅಲ್ಲಿಯೂ ಲಕ್ಷಾಂತರ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ದಾಖಲೆಗಳನ್ನು ಮುಂದಿಟ್ಟರು.

ಇಷ್ಟಲ್ಲದೇ ಜಿಲ್ಲೆಯಲ್ಲಿ ಹೀಗೆಯೇ ಹಲವು ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿರುವ ನರೇಶ್ ಸುಮಾರು ನಾಲ್ಕು ಕೋಟಿಗೂ ಹೆಚ್ಚು ಹಣ ನುಂಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಎಸ್‌ಎಸ್ಎಲ್‌ಸಿ ಪರೀಕ್ಷೆ-1ರ ಮೌಲ್ಯಮಾಪನ ಏಪ್ರಿಲ್.8ರಿಂದ ಪ್ರಾರಂಭ

ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಏಪ್ರಿಲ್.8ರಿಂದ ಪ್ರಾರಂಭವಾಗಲಿದೆ. ರಾಜ್ಯದ ಎಲ್ಲಾ 35 ಶೈಕ್ಷಣಿಕ ಜಿಲ್ಲೆಗಳಲ್ಲಿ ಏಕಕಾಲಕ್ಕೆ…

2 hours ago

ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ಶಾಸಕರು ಐಪಿಎಲ್‌ ಟಿಕೆಟ್‌ ಕೇಳೋದು ತಪ್ಪು. ಐಪಿಎಲ್‌ ಆಸಕ್ತಿ ಇರೋರು ಕಾಸು ಕೊಟ್ಟು ಟಿಕೆಟ್‌ ತಗೋಳಿ ಎಂದು ಮಾಜಿ…

2 hours ago

ಇಂದಿನಿಂದ ರಾಜ್ಯದಲ್ಲಿ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಐದು ದಿನಗಳ ಕಾಲ ಗುಡುಗು-ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ವಿಧಾನಪರಿಷತ್‌ ಸದಸ್ಯತ್ವಕ್ಕೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ರಾಜೀನಾಮೆ

ಪಾಟ್ನಾ: ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇತ್ತೀಚೆಗೆ ರಾಜ್ಯಸಭೆಗೆ…

2 hours ago

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿ

ಕುಶಾಲನಗರ: ಹಿಟ್‌ ಅಂಡ್‌ ರನ್‌ಗೆ ಯುವಕ ಬಲಿಯಾಗಿರುವ ಘಟನೆ ಬೈಲಕುಪ್ಪೆ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರು, ಆಟೋ ಹಾಗೂ ಬೈಕ್‌…

2 hours ago

ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಡೀಸೆಲ್‌ ಸಮಸ್ಯೆ ಇಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ತಕ್ಷಣಕ್ಕೆ ಡೀಸೆಲ್‌ ಸಮಸ್ಯೆ ಇಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇರಾನ್‌-ಇಸ್ರೇಲ್‌ ಸಂಘರ್ಷ…

4 hours ago