ಮಂಡ್ಯ

ಮಂಡ್ಯ | ನಿರ್ಮಿತಿ ಕೇಂದ್ರದಲ್ಲಿ ಭಾರಿ ಭ್ರಷ್ಟಾಚಾರ ; ತನಿಖೆಗೆ ಆಗ್ರಹ

ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ ನಡೆಸಿರುವ ಕೇಂದ್ರದ ನಿವೃತ್ತ ಯೋಜನಾ ವ್ಯವಸ್ಥಾಪಕ ನರೇಶ್ ನಾಲ್ಕಾರು ಕೋಟಿ ರೂ ಲಪಟಾಯಿಸಿದ್ದಾರೆ ಎಂದು ದೂರಿದರು.

ಮದ್ದೂರು ತಾಲೂಕಿನ ಹರಕನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡದ ಕಾಮಗಾರಿ ಆರಂಭಿಸದೇ ಕಟ್ಟಡ ಕಾಮಗಾರಿಗೆ ಮೀಸಲಿಟ್ಟಿದ್ದ ೨೫ ಲಕ್ಷ ರೂಗಳಲ್ಲಿ ಮುಂಗಡ ಹಣ ೧೮.೭೫ ಬಿಡುಗಡೆಯಾಗಿದ್ದು, ಕೇಂದ್ರದ ಸಿಬ್ಬಂದಿಯೇ ಆದ ಸುನಿಲ್ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಠಿಸಿ, ೧,೦೨,೬೧೦ ರೂ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಜಿಲ್ಲೆಯಲ್ಲಿ ಮಂಡ್ಯ, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಮದ್ದೂರು, ಪಾಂಡವಪುರ ತಾಲೂಕಿನಲ್ಲಿ ಐಟಿಐ ಕಾಲೇಜುಗಳ ವರ್ಕ್‌ಶಾಪ್ ಮತ್ತು ಟೆಕ್ನಾಲಜಿ ಲ್ಯಾಬ್ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ ೮೩.೨೯ ಲಕ್ಷ ರೂ ಮತ್ತು ೨೦.೨೯ ಲಕ್ಷ ರೂ ಕ್ರಮವಾಗಿ ಸಿದ್ದಗೊಳಿಸಿ, ಅಲ್ಲಿಯೂ ಲಕ್ಷಾಂತರ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ದಾಖಲೆಗಳನ್ನು ಮುಂದಿಟ್ಟರು.

ಇಷ್ಟಲ್ಲದೇ ಜಿಲ್ಲೆಯಲ್ಲಿ ಹೀಗೆಯೇ ಹಲವು ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿರುವ ನರೇಶ್ ಸುಮಾರು ನಾಲ್ಕು ಕೋಟಿಗೂ ಹೆಚ್ಚು ಹಣ ನುಂಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ಕೊಳ್ಳದ ರೈತರಿಗೆ 4 ಕಟ್ಟು ನೀರು ; ಕಾವೇರಿ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…

8 hours ago

ಮೈಸೂರು | ಭಾರತ್ ಜೋಡೋ ನೋಂದಣಿಗೆ ಚಾಲನೆ

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…

8 hours ago

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

9 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

12 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

14 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

15 hours ago