ಮಂಡ್ಯ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಂದ ವ್ಯಾಪವ ಭ್ರಷ್ಟಾಚಾರ ನಡೆದಿದ್ದು, ಅಕ್ರಮದಲ್ಲಿ ಭಾಗಿಯಾಗಿರುವವರ ವಿರುದ್ಧ ಶಿಸ್ತುಕ್ರಮ ಕೈಗೊಂಡು ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಸಾಮಾಜಿಕ ಕಾರ್ಯಕರ್ತ ಮಧು ಆಗ್ರಹಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿರ್ಮಿತಿ ಕೇಂದ್ರದಿಂದ ನಿರ್ಮಿಸಲಾಗುವ ಕಟ್ಟಡಗಳ ನಿರ್ಮಾಣದಲ್ಲಿ ಬಾರಿ ಅವ್ಯವಹಾರ ನಡೆಸಿರುವ ಕೇಂದ್ರದ ನಿವೃತ್ತ ಯೋಜನಾ ವ್ಯವಸ್ಥಾಪಕ ನರೇಶ್ ನಾಲ್ಕಾರು ಕೋಟಿ ರೂ ಲಪಟಾಯಿಸಿದ್ದಾರೆ ಎಂದು ದೂರಿದರು.
ಮದ್ದೂರು ತಾಲೂಕಿನ ಹರಕನಹಳ್ಳಿ ಗ್ರಾಮದಲ್ಲಿ ಶಾಲಾ ಕಟ್ಟಡದ ಕಾಮಗಾರಿ ಆರಂಭಿಸದೇ ಕಟ್ಟಡ ಕಾಮಗಾರಿಗೆ ಮೀಸಲಿಟ್ಟಿದ್ದ ೨೫ ಲಕ್ಷ ರೂಗಳಲ್ಲಿ ಮುಂಗಡ ಹಣ ೧೮.೭೫ ಬಿಡುಗಡೆಯಾಗಿದ್ದು, ಕೇಂದ್ರದ ಸಿಬ್ಬಂದಿಯೇ ಆದ ಸುನಿಲ್ ಹೆಸರಿನಲ್ಲಿ ನಕಲಿ ಬಿಲ್ ಸೃಷ್ಠಿಸಿ, ೧,೦೨,೬೧೦ ರೂ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿ ಮಂಡ್ಯ, ಮಳವಳ್ಳಿ, ನಾಗಮಂಗಲ, ಕೆ.ಆರ್.ಪೇಟೆ, ಮದ್ದೂರು, ಪಾಂಡವಪುರ ತಾಲೂಕಿನಲ್ಲಿ ಐಟಿಐ ಕಾಲೇಜುಗಳ ವರ್ಕ್ಶಾಪ್ ಮತ್ತು ಟೆಕ್ನಾಲಜಿ ಲ್ಯಾಬ್ ಕಟ್ಟಡಗಳ ನಿರ್ಮಾಣ ಕಾಮಗಾರಿಗೆ ಅಂದಾಜು ಮೊತ್ತ ೮೩.೨೯ ಲಕ್ಷ ರೂ ಮತ್ತು ೨೦.೨೯ ಲಕ್ಷ ರೂ ಕ್ರಮವಾಗಿ ಸಿದ್ದಗೊಳಿಸಿ, ಅಲ್ಲಿಯೂ ಲಕ್ಷಾಂತರ ರೂ.ಗಳ ಅವ್ಯವಹಾರ ನಡೆಸಿದ್ದಾರೆ ಎಂದು ದಾಖಲೆಗಳನ್ನು ಮುಂದಿಟ್ಟರು.
ಇಷ್ಟಲ್ಲದೇ ಜಿಲ್ಲೆಯಲ್ಲಿ ಹೀಗೆಯೇ ಹಲವು ಕಟ್ಟಡ ನಿರ್ಮಾಣ ಕಾಮಗಾರಿಗಳಲ್ಲಿ ಅವ್ಯವಹಾರ ನಡೆಸಿರುವ ನರೇಶ್ ಸುಮಾರು ನಾಲ್ಕು ಕೋಟಿಗೂ ಹೆಚ್ಚು ಹಣ ನುಂಗಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.
ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…
ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…
ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…
ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…
ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…
ಕೊಡಗು: ಎಲಿಫೆಂಟ್ ಬಾತಿಂಗ್ ವೇಳೆ ಆನೆಯ ಅಡಿಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದಿದೆ. ಚೆನ್ನೈ…