ಮಂಡ್ಯ: ಇಲ್ಲಿನ ಮಿಮ್ಸ್ ಹಾಸ್ಟೆಲ್ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳ ಮೂಲದ ಭರತ್ ಯೆತ್ತಿನಮನೆ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ.
ಪ್ರಥಮ ವರ್ಷದ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದ ಭರತ್, ಕಳೆದ ತಡರಾತ್ರಿ ಹಾಸ್ಟೆಲ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿಮ್ಸ್ ನಿರ್ದೇಶಕ ಡಾ. ನರಸಿಂಹಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ರಾತ್ರಿ 12 ಗಂಟೆಯವರೆಗೆ ಭರತ್ ಪಕ್ಕದ ರೂಂನಲ್ಲಿ ಸ್ನೇಹಿತರೊಂದಿಗೆ ಮಾತಾಡಿದ್ದಾನೆ. ಬಳಿಕ ತನ್ನ ರೂಂಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತನ ಜೊತೆ ರೂಂನಲ್ಲಿ ಇಬ್ಬರು ಇದ್ದರು. ನಿನ್ನೆ ಅವರಿಬ್ಬರು ಊರಿಗೆ ಹೋಗಿದ್ದರು. ಬೆಳಿಗ್ಗೆ ಒಬ್ಬ ವಿದ್ಯಾರ್ಥಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಭರತ್ ಫುಟ್ಬಾಲ್ ಆಟದಲ್ಲಿ ಮುಂದೆ ಇದ್ದ. ಕಳೆದ ವರ್ಷ ಭರತ್ ಹೆಚ್ಚು ಕಾಲೇಜಿಗೆ ಅಟೆಂಡ್ ಆಗಿಲ್ಲ. ಹೀಗಾಗಿ ಮೊದಲ ವರ್ಷದ ಪರೀಕ್ಷೆ ಬರೆಯಲು ಅವಕಾಶ ಸಿಕ್ಕಿರಲಿಲ್ಲ. ಈ ವರ್ಷ ಪರೀಕ್ಷೆಗಳನ್ನು ಕ್ಲಿಯರ್ ಮಾಡಿಕೊಳ್ಳಬೇಕು ಅಂದುಕೊಂಡಿದ್ದ. ಹೀಗಾಗಿ ಪರೀಕ್ಷಾ ಶುಲ್ಕ ಕಟ್ಟಲು ಭರತ್ ಹಾಸ್ಟೆಲ್ಗೆ ಬಂದಿದ್ದ.
ರಾತ್ರಿ ಭರತ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಪೋಷಕರಿಗೆ ಮಾಹಿತಿ ನೀಡಿದ್ದೇವೆ ಎಂದು ಹೇಳಿದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…